ಆ್ಯಪ್ನಗರ

ಫೇಸ್‌ಬುಕ್‌ನಲ್ಲಿ ವಾಲ್ಮೀಕಿ, ಶಿವಾಜಿ, ರಾಯಣ್ಣ ಅವಹೇಳನ, ಲಿಂಗಸುಗೂರು ಉದ್ವಿಗ್ನ

ಸಾಮಾಜಿಕ ಜಾಲತಾಣಗಳಲ್ಲಿ ಈಗ ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ಸರಕಾರ ಕ್ರಮ ಕೈಗೊಳ್ಳಬೇಕಾಗಿದೆ.

Vijaya Karnataka Web 25 Aug 2019, 7:58 pm
ರಾಯಚೂರು: ಫೇಸ್‌ಬುಕ್‌ನಲ್ಲಿ ವಾಲ್ಮೀಕಿ, ಶಿವಾಜಿ, ಸಂಗೊಳ್ಳಿ ರಾಯಣ್ಣ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಿನ್ನೆಲೆಯಲ್ಲಿ ಲಿಂಗಸುಗೂರು ಪಟ್ಟಣದಲ್ಲಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
Vijaya Karnataka Web ಪ್ರತಿಭಟನೆ
ಪ್ರತಿಭಟನೆ


ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್‌ ಅಪ್‌ಲೋಡ್‌ ಆಗುತ್ತಿದ್ದಂತೆ ಯುವಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಲಿಂಗಸುಗೂರು ಪಟ್ಟಣದ ಪೊಲೀಸ್ ಠಾಣೆಯ ಮುಂದೆಯೇ ಯುವಕರು ಪ್ರತಿಭಟನೆ ನಡೆಸಿದರು.

ಘಟನೆ ಹಿನ್ನೆಲೆ ಆರೋಪಿ ಸೈಯದ್ ಚಾವೂಸ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದಂತೆ ಇನ್ನೂ 10ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಉದ್ರಿಕ್ತರು ಆರೋಪಿಯ ಸ್ನೇಹಿತನನ್ನು ಮಂಜುನಾಥನ ಮೇಲೆ ಹಲ್ಲೆ ನಡೆಸಿದರು.

ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಜನರು, ಟೈರ್‌ಗೆ ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಉದ್ರಿಕ್ತರು ಕಲ್ಲು ತೂರಾಟ ನಡೆಸಿದರು. ಪೊಲೀಸ್‌ ಜೀಪ್‌ಗೆ ಹಾನಿಯಾಗಿದೆ. ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಲಿಂಗಸುಗೂರಿನಲ್ಲಿ ಪರಿಸ್ಥಿತಿ ಈಗ ಉದ್ವಿಗ್ನಗೊಂಡಿದೆ.

ಇಂಥ ಅವಹೇಳನಕಾರಿ ಪೋಸ್ಟ್‌ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ