ಆ್ಯಪ್ನಗರ

ನೂತನ ಪಿಂಚಣಿ ಯೋಜನೆ ರದ್ದತಿಗೆ ಸರ್ಕಾರದ ಜತೆ ಚರ್ಚೆ

ಸರಕಾರಿ ಇಲಾಖೆಗಳಲ್ಲಿ371(ಜೆ) ಸಂಪೂರ್ಣ ಅನುಷ್ಠಾನ, ಹೊಸ ಪಿಂಚಣಿ ಯೋಜನೆ ರದ್ದತಿ ಕುರಿತು ಸರಕಾರದೊಂದಿಗೆ ಚರ್ಚಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಕ್ಷರಿ ಹೇಳಿದರು.

Vijaya Karnataka 26 Aug 2019, 5:51 pm
ರಾಯಚೂರು: ಸರಕಾರಿ ಇಲಾಖೆಗಳಲ್ಲಿ371(ಜೆ) ಸಂಪೂರ್ಣ ಅನುಷ್ಠಾನ, ಹೊಸ ಪಿಂಚಣಿ ಯೋಜನೆ ರದ್ದತಿ ಕುರಿತು ಸರಕಾರದೊಂದಿಗೆ ಚರ್ಚಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಕ್ಷರಿ ಹೇಳಿದರು.
Vijaya Karnataka Web discussion with government on cancellation of new pension scheme
ನೂತನ ಪಿಂಚಣಿ ಯೋಜನೆ ರದ್ದತಿಗೆ ಸರ್ಕಾರದ ಜತೆ ಚರ್ಚೆ


ನಗರದ ಪತ್ರಿಕಾ ಭವನದಲ್ಲಿಭಾನುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿಮಾತನಾಡಿ, ಹೈದ್ರಾಬಾದ್‌ ಕರ್ನಾಟಕ ಭಾಗದ ವಿಶೇಷ ಸ್ಥಾನಮಾನ 371(ಜೆ) ಸಂಪೂರ್ಣ ಅನುಷ್ಠಾನದಲ್ಲಿಕೆಲ ನ್ಯೂನತೆಗಳಿವೆ. ಅದನ್ನು ಸರಿಪಡಿಸುವ ನಿಟ್ಟಿನಲ್ಲಿಈಗಾಗಲೇ ಕಾರ್ಯ ಪ್ರವೃತ್ತರಾಗಿದ್ದೇವೆ. ಅವೈಜ್ಞಾನಿಕವಾಗಿರುವ ಹೊಸ ಪಿಂಚಣಿ ಯೋಜನೆ ರದ್ದತಿ ಕುರಿತು ಕೇಂದ್ರ ಸರಕಾರವು ರಾಜ್ಯಗಳಿಗೆ ಸಂಪೂರ್ಣ ಸ್ವಾಯತ್ತತೆ ನೀಡಿದ್ದು, ಯೋಜನೆ ರದ್ದತಿಯಿಂದ ಆಗುವ ಆರ್ಥಿಕ ಹೊರೆ ಕುರಿತು ರಾಜ್ಯ ಸರಕಾರದೊಂದಿಗೆ ಚರ್ಚಿಸಲಾಗುತ್ತಿದೆ ಎಂದರು.

ಭರವಸೆ;ಸರಕಾರಿ ನೌಕರರಿಗೂ ಪೊಲೀಸ್‌ ಇಲಾಖೆಯ ಮಾದರಿಯಲ್ಲಿಆರೋಗ್ಯ ಭಾಗ್ಯ ಯೋಜನೆ ಜಾರಿಗೊಳಿಸಿ ನಗದು ರಹಿತ ಚಿಕಿತ್ಸೆ ದೊರಕಿಸುವ ನಿಟ್ಟಿನಲ್ಲಿಪ್ರಯತ್ನಿಸಲಾಗುತ್ತಿದೆ. ಶಿಕ್ಷಕರ ವರ್ಗಾವಣೆಯಲ್ಲಿಕೆಲ ಅವೈಜ್ಞಾನಿಕ ನಿಯಮಗಳಿಂದ ಗೊಂದಲ ಸೃಷ್ಟಿಯಾಗಿವೆ. ಶಿಕ್ಷಕರು ನೆಮ್ಮದಿಯಿಂದ ಶಾಲೆಯಲ್ಲಿಪಾಠ ಮಾಡಲು, ಅವೈಜ್ಞಾನಿಕ ನಿಯಮಗಳಿಗೆ ತಿದ್ದುಪಡಿ ತರುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ7 ಲಕ್ಷಕ್ಕೂ ಅಧಿಕ ಸರಕಾರಿ ನೌಕರರಿದ್ದು, ಸುಮಾರು 2.4 ಲಕ್ಷ ಹುದ್ದೆಗಳು ಖಾಲಿ ಇವೆ. ಸರಕಾರಿ ನೌಕರರು ಒತ್ತಡದಲ್ಲಿಕಾರ್ಯ ನಿರ್ವಹಿಸುತ್ತಿದ್ದು, ಸರಕಾರದ ಉನ್ನತ ಶ್ರೇಣಿಯ ಅಧಿಕಾರಿಗಳಿಗೆ ಮಾತ್ರ ವರ್ಷಗಟ್ಟಲೆ ತರಬೇತಿ ನೀಡಲಾಗುತ್ತದೆ. ಆದರೆ ಸರಕಾರಿ ನೌಕರನಿಗೆ ಮಾತ್ರ ಯಾವುದೇ ತರಬೇತಿ ನೀಡುವುದಿಲ್ಲ. ಆದ್ದರಿಂದ ಅವರ ಕೆಲಸದ ಕಾರ್ಯಕ್ಷಮತೆ ಹೆಚ್ಚಿಸಲು ಸರಕಾರಿ ನೌಕರಿಗೂ ಉದ್ಯೋಗದ ಬಗ್ಗೆ ಕೌಶಲ್ಯ ತರಬೇತಿ ನೀಡುವ ಕುರಿತು ಚಿಂತಿಸಲಾಗುತ್ತದೆ ಎಂದರು.

ಸಂಘಟನೆಯ ಪದಾಧಿಕಾರಿಗಳಾದ ಮಹಾಂತೇಶ್‌ ಪಾಟೀಲ್‌, ಜಗದೀಶ ಪಾಟೀಲ್‌, ಶ್ರೀನಿವಾಸ, ಬಸವರಾಜ್‌, ಹನುಮಂತರಾಯ, ಅಯ್ಯನಗೌಡ, ಆಲಂ ಪಾಷಾ, ಲಕ್ಷತ್ರ್ಮಪ್ಪ, ನಂದೀಶ ಸೇರಿ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ