ಆ್ಯಪ್ನಗರ

ರಾಂಪುರ ನಾಲೆ ನಿರ್ವಹಣೆಯಲ್ಲಿ ಅವ್ಯವಹಾರ : ಕ್ರಮಕ್ಕೆ ಆಗ್ರಹ

ರಾಂಪುರ ಏತ ನೀರಾವರಿ ಯೋಜನೆಯ ನಾಲೆ ನಿರ್ವಹಣೆ ಕಾಮಗಾರಿಯಲ್ಲಿ ಅವ್ಯವಹಾರವಾಗಿದ್ದು, ತಪ್ಪಿಸ್ಥತರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ, ರಾಜ್ಯ ರೈತ ಸಂಘ(ಕೋಡಿಹಳ್ಳಿ ಬಣ) ಪದಾಧಿಕಾರಿಗಳು, ನಾರಾಯಣಪುರ ವೃತ್ತದ ಮುಖ್ಯ ಎಂಜಿನಿಯರ್‌ ಕಚೇರಿ ಸಿಬ್ಬಂದಿಗೆ ಮಂಗಳವಾರ ಮನವಿ ಸಲ್ಲಿಸಿದರು.

Vijaya Karnataka 15 Aug 2018, 5:00 am
ಲಿಂಗಸುಗೂರು :ರಾಂಪುರ ಏತ ನೀರಾವರಿ ಯೋಜನೆಯ ನಾಲೆ ನಿರ್ವಹಣೆ ಕಾಮಗಾರಿಯಲ್ಲಿ ಅವ್ಯವಹಾರವಾಗಿದ್ದು, ತಪ್ಪಿಸ್ಥತರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ, ರಾಜ್ಯ ರೈತ ಸಂಘ(ಕೋಡಿಹಳ್ಳಿ ಬಣ) ಪದಾಧಿಕಾರಿಗಳು, ನಾರಾಯಣಪುರ ವೃತ್ತದ ಮುಖ್ಯ ಎಂಜಿನಿಯರ್‌ ಕಚೇರಿ ಸಿಬ್ಬಂದಿಗೆ ಮಂಗಳವಾರ ಮನವಿ ಸಲ್ಲಿಸಿದರು.
Vijaya Karnataka Web disruption in the management of rampur the demand for action
ರಾಂಪುರ ನಾಲೆ ನಿರ್ವಹಣೆಯಲ್ಲಿ ಅವ್ಯವಹಾರ : ಕ್ರಮಕ್ಕೆ ಆಗ್ರಹ


2017-18ನೇ ಸಾಲಿನಲ್ಲಿ ರಾಂಪುರ ಯೋಜನೆ ನಾಲೆಗಳಲ್ಲಿ ಜಂಗಲ್‌ ಕಟಿಂಗ್‌, ಹೂಳು ಎತ್ತುವ ಕಾಮಗಾರಿ ಮಂಜೂರಾಗಿದೆ. ಆದರೆ, ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಕಾಮಗಾರಿ ನಿರ್ವಹಿಸದೇ ಬಿಲ್‌ ಎತ್ತಿದ್ದಾರೆ. 2018-19ನೇ ಸಾಲಿನಲ್ಲೂ ನಿರ್ವಹಣೆಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆಯಾಗಿದೆ. ಈಗಾಗಲೇ ನಾಲೆಗೆ ನೀರು ಹರಿಸಲಾಗಿದೆ. ಈ ಸಮಯದಲ್ಲಿ ಟೆಂಡರ್‌ ಕರೆದು ಕಾಮಗಾರಿಗೆ ಅನುಮತಿ ನೀಡಿದ್ದಾರೆ. ನೀರಿರುವ ನಾಲೆಯಲ್ಲಿ ಕಾಮಗಾರಿ ಮಾಡುವ ಮೂಲಕ ಸರಕಾರದ ಅನುದಾನ ಹೊಡೆಯುವ ಹೊಂಚುಹಾಕಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ಮಾಡಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ವಾಸುದೇವ ಮೇಟಿ, ಹಿರಿಯ ಮುಖಂಡ ಸಿದ್ಧಲಿಂಗೇಶ್ವರ ಪಾಟೀಲ್‌, ತಾಲೂಕು ಅಧ್ಯಕ್ಷ ಬಸನಗೌಡ ಪಾಟೀಲ್‌, ಶಿವಪುತ್ರಗೌಡ ಸೇರಿ ಇತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ