ಆ್ಯಪ್ನಗರ

'ಉಚಿತ ಲ್ಯಾಪ್‌ಟಾಪ್‌ ವಿತರಿಸಿ'

ರಾಜ್ಯ ಸರಕಾರ ಎಲ್ಲವರ್ಷದ ಪದವಿ ವಿದ್ಯಾರ್ಥಿಗಳಿಗೆ ವಿಳಂಬ ಮಾಡದೇ ಉಚಿತ ಲ್ಯಾಪ್‌ಟಾಪ್‌ ವಿತರಿಸಬೇಕೆಂದು ಆಗ್ರಹಿಸಿ ಸರಕಾರಿ ಕಾಲೇಜಿನ ಪದವಿ ವಿದ್ಯಾರ್ಥಿಗಳು ಎಐಡಿಎಸ್‌ಒ ನೇತೃತ್ವದಲ್ಲಿಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.

Vijaya Karnataka 20 Feb 2020, 3:48 pm
ರಾಯಚೂರು; ರಾಜ್ಯ ಸರಕಾರ ಎಲ್ಲವರ್ಷದ ಪದವಿ ವಿದ್ಯಾರ್ಥಿಗಳಿಗೆ ವಿಳಂಬ ಮಾಡದೇ ಉಚಿತ ಲ್ಯಾಪ್‌ಟಾಪ್‌ ವಿತರಿಸಬೇಕೆಂದು ಆಗ್ರಹಿಸಿ ಸರಕಾರಿ ಕಾಲೇಜಿನ ಪದವಿ ವಿದ್ಯಾರ್ಥಿಗಳು ಎಐಡಿಎಸ್‌ಒ ನೇತೃತ್ವದಲ್ಲಿಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.
Vijaya Karnataka Web distribute free laptop
'ಉಚಿತ ಲ್ಯಾಪ್‌ಟಾಪ್‌ ವಿತರಿಸಿ'


ರಾಜ್ಯವ್ಯಾಪಿ ಸರಕಾರಿ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ತಕ್ಷಣ ಲ್ಯಾಪ್‌ಟಾಪ್‌ ವಿತರಿಸಬೇಕೆಂದು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ರವಾನಿಸಿದರು. ಸರಕಾರಿ ಕಾಲೇಜುಗಳಲ್ಲಿಪ್ರಥಮ ವರ್ಷ ಬಿ.ಎ, ಬಿ.ಕಾಂ, ಬಿಎಸ್ಸಿ, ಹಾಗೂ ಬಿಸಿಎ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಣೆ ಮಾಡುವುದಾಗಿ ಸರಕಾರ ಘೋಷಿಸಿತ್ತು. 2019-20ನೇ ವರ್ಷದ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡುತ್ತಿರುವುದು ಶ್ಲಾಘನೀಯ ಎಂದರು.

ಆದರೆ ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಈ ಯೋಜನೆ ಫಲ ಸಿಗದಿರುವುದು ವಿಷಾದನೀಯ. ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಪದವಿ ಮುಗಿಸಿಕೊಂಡು ಕೆಲವೇ ತಿಂಗಳುಗಳಲ್ಲಿಹೊರಹೋಗುತ್ತಾರೆ. ಇವರಿಗೆ ಉಚಿತ ಲ್ಯಾಪ್‌ಟಾಪ್‌ ವಿತರಿಸುವುದರಿಂದ ಉನ್ನತ ವ್ಯಾಸಂಗಕ್ಕೆ ಅನುಕೂಲ ಕಲ್ಪಿಸಿದಂತಾಗುತ್ತದೆ ಎಂದು ಹೇಳಿದರು.

ಆಗ್ರಹ: ಪದವಿ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್‌ ವಿತರಿಸದಿದ್ದರೆ ಸರಕಾರವೇ ತಾರತಮ್ಯ ಮಾಡಿದಂತೆ ಆಗುತ್ತದೆ. ಆದ್ದರಿಂದ ಎಲ್ಲವರ್ಷದ ಪದವಿ ವಿದ್ಯಾರ್ಥಿಗಳಿಗೆ ವಿಳಂಬ ಮಾಡದೇ ಉಚಿತ ಲ್ಯಾಪ್‌ಟಾಪ್‌ ವಿತರಿಸಬೇಕು. ಉಚಿತ ಲ್ಯಾಪ್‌ಟಾಪ್‌ ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು. ಮುಂದಿನ ಬಾರಿಯೂ ಸರಕಾರಿ ಕಾಲೇಜಿನ ಎಲ್ಲಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಲು ಬಜೆಟ್‌ನಲ್ಲಿಹಣ ಮೀಸಲಿಡಬೇಕು. ಶೈಕ್ಷಣಿಕ ರಂಗದಲ್ಲಿರೂಪಿಸುವ ಪ್ರತಿ ಯೋಜನೆಯೂ ರಾಜ್ಯದ ಕಟ್ಟಕಡೆಯ ವಿದ್ಯಾರ್ಥಿಯನ್ನೂ ತಲುಪುವಂತಿರಬೇಕು ಎಂದು ಆಗ್ರಹಿಸಿದರು.

ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಮಹೇಶ ಚೀಕಲಪರ್ವಿ ವಿದ್ಯಾರ್ಥಿಗಳಾದ ವೆಂಕಟೇಶ, ರಾಮಲಿಂಗ, ಪ್ರಭು, ಬಸ್ಸಮ್ಮ, ರಾಕೇಶ ಸೇರಿ ಅನೇಕರಿದ್ದರು.

-


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ