ಆ್ಯಪ್ನಗರ

‘ಆಧುನಿಕ ಕೃಷಿ ಮೂಲಕ ಆದಾಯ ಗಳಿಸಿ’

ರೈತರು ಅತ್ಯಾಧುನಿಕ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳುವ ಮೂಲಕ ತಮ್ಮ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬೇಕು ಎಂದು ರಾಯಚೂರು ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿ ಡಾ.ಬದರಿ ಪ್ರಸಾದ್‌ ಹೇಳಿದರು.

Vijaya Karnataka 15 Jun 2018, 5:00 am
ಕವಿತಾಳ : ರೈತರು ಅತ್ಯಾಧುನಿಕ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳುವ ಮೂಲಕ ತಮ್ಮ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬೇಕು ಎಂದು ರಾಯಚೂರು ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿ ಡಾ.ಬದರಿ ಪ್ರಸಾದ್‌ ಹೇಳಿದರು.
Vijaya Karnataka Web earning income through modern agriculture
‘ಆಧುನಿಕ ಕೃಷಿ ಮೂಲಕ ಆದಾಯ ಗಳಿಸಿ’


ಪಟ್ಟಣ ಸಮೀಪದ ಪಾಮನಕಲ್ಲೂರು ಗ್ರಾ.ಪಂ.ವ್ಯಾಪ್ತಿಯ ಆನಂದಗಲ್‌ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾಲಯ ರಾಯಚೂರು ಹಾಗೂ ಐಸಿಎಆರ್‌ ಕೃಷಿ ವಿಜ್ಞಾನ ಕೇಂದ್ರ ರಾಯಚೂರು ಮತ್ತು ಅರಣ್ಯ, ಪಶು ಸಂಗೋಪನಾ, ತೋಟಗಾರಿಕೆ, ರೇಷ್ಮೆ ಇಲಾಖೆಗಳು ಸೇರಿದಂತೆ ಇನ್ನಿತರ ನಾನಾ ಇಲಾಖೆಗಳ ಸಹಯೋಗದೊಂದಿಗೆ ಗುರುವಾರ ಹಮ್ಮಿಕೊಂಡ ಕೃಷಿ ಕಲ್ಯಾಣ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಯೋಜನೆಯು ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಕರ್ನಾಟಕ ರಾಜ್ಯದ 30 ಜಿಲ್ಲೆಗಳ ಪೈಕಿ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಐದು ಹಳ್ಳಿಗಳನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಪಾಮನಕಲ್ಲೂರು ಹೋಬಳಿಯ ಆನಂದಗಲ್‌ನಲ್ಲಿನ ಹೆಚ್ಚಿನ ರೈತರಿಗೆ ಇದು ಅನುಕೂಲವಾಗುವ ದೃಷ್ಟಿಯಿಂದ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ರೈತರು ಕೃಷಿ ಚಟುವಟಿಕೆಯೊಂದಿಗೆ ಜೇನು ಸಾಕಾಣಿಕೆ, ಅಣಬೆ ಬೇಸಾಯ, ಅಲ್ಲದೇ ತೋಟಗಾರಿಕೆ ಬೆಳೆಗಳಾದ ನಿಂಬೆ, ಪೇರಲ, ಮೋಸಂಬಿ ಸೇರಿ ಇತರೆ ಉದ್ಯಮ ನಡೆಸಬೇಕು ಎಂದು ಹೇಳಿದರು.

ಪಾಮನಕಲ್ಲೂರು ರೈತ ಸಂಪರ್ಕ ಕೇಂದ್ರದ ಅಧಿಕಾರಿ ಶ್ರೀಶೈಲ ಬಿ.ಆರ್‌. ಮಾತನಾಡಿ ಕೃಷಿ ಇಲಾಖೆಯ ನಾನಾ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಪಶು ಸಂಗೋಪನೆಯ ಸಹಾಯಕ ನಿರ್ದೇಶಕ ವೀರನಾಯಕ, ಅರಣ್ಯ ಇಲಾಖೆಯ ವಿಜಯಕುಮಾರ, ತೋಟಗಾರಿಗೆಯ ಪಂಪಾಪತಿ, ಕೃಷಿ ಇಲಾಖೆಯ ತಾಂತ್ರಿಕ ವ್ಯವಸ್ಥಾಪಕ ಮಹ್ಮದ್‌ ಖಾಲೀದ್‌ ಸೇರಿ ಇತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ