ಆ್ಯಪ್ನಗರ

ಮದ್ಯ ಮಾರಾಟ ತಡೆ ವಿಫಲ : ದೂರು

ಜಿಲ್ಲೆಯಾದ್ಯಂತ ಅನಧಿಕತ ಮದ್ಯ ಮಾರಾಟ ತಡೆಗಟ್ಟುವಲ್ಲಿ ವಿಫಲರಾದ ಜಿಲ್ಲಾ ಅಬಕಾರಿ ಡಿ.ಸಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಮುದಾಯ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೈ.ಬಿ.ಭೈರವ ಲೋಕಾಯುಕ್ತರಿಗೆ ಈಚೆಗೆ ದೂರು ಸಲ್ಲಿಸಿದ್ದಾರೆ.

ವಿಕ ಸುದ್ದಿಲೋಕ 5 Mar 2016, 7:07 am
ರಾಯಚೂರು; ಜಿಲ್ಲೆಯಾದ್ಯಂತ ಅನಧಿಕತ ಮದ್ಯ ಮಾರಾಟ ತಡೆಗಟ್ಟುವಲ್ಲಿ ವಿಫಲರಾದ ಜಿಲ್ಲಾ ಅಬಕಾರಿ ಡಿ.ಸಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಮುದಾಯ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೈ.ಬಿ.ಭೈರವ ಲೋಕಾಯುಕ್ತರಿಗೆ ಈಚೆಗೆ ದೂರು ಸಲ್ಲಿಸಿದ್ದಾರೆ.
Vijaya Karnataka Web failure to hinder the sale of alcohol the complaint
ಮದ್ಯ ಮಾರಾಟ ತಡೆ ವಿಫಲ : ದೂರು


ರಾಯಚೂರು ಜಿಲ್ಲೆಯಾದ್ಯಂತ ಐದು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಅನಧಿಕತವಾಗಿ ಮದ್ಯದ ಅಂಗಡಿಗಳು ತಲೆ ಎತ್ತುತ್ತಿವೆ. ನಗರ ಮತ್ತು ತಾಲೂಕಿನ ಹಳ್ಳಿಗಳಲ್ಲಿ, ರಸ್ತೆ ಬದಿಗಳಲ್ಲಿ, ಹೆದ್ದಾರಿಗಳಲ್ಲಿ, ಸ್ಲಂ ಏರಿಯಾಗಳಲ್ಲಿ, ಕಾರ್ಮಿಕರ ವಾರ್ಡ್‌ಗಳಲ್ಲಿ, ಶಾಲಾ ಕಾಲೇಜು ಪಕ್ಕದಲ್ಲಿ, ಮಂದಿರ ಮಸೀದಿಗಳ ಪಕ್ಕದಲ್ಲಿ ಎಲ್ಲೆಂದರಲ್ಲಿ ಅನಧಿಕತ ಮಧ್ಯ ಮಾರಾಟ ಎಗ್ಗಿಲ್ಲದೇ ಮಾರಾಟ ಮಾಡಲಾಗುತ್ತಿದೆ. ಪರವಾನಗಿ ತೆಗದುಕೊಳ್ಳದ ಖಾಸಗಿ ವ್ಯಕ್ತಿಗಳು ಅಕ್ರಮ ನಕಲಿ ಮದ್ಯ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಅಕ್ರಮ ನಕಲಿ ಮದ್ಯ ತಡೆಗಟ್ಟಿ ಬೀದಿಗೆ ಬೀಳುತ್ತಿರುವ ಕುಟುಂಬಗಳ ರಕ್ಷಣೆಗೆ ಮುಂದಾಗಬೇಕು. ಕ್ರಮ ಜರುಗಿಸುವಲ್ಲಿ ವಿಫಲರಾದರೆ ಹೋರಾಟಕ್ಕಿಳಿಯಬೇಕಾಗುತ್ತದೆ ಎಂದು ಲೋಕಾಯುಕ್ತರಿಗೆ ಸಲ್ಲಿಸಿದ ದೂರಿನಲ್ಲಿ ಎಚ್ಚರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ