ಆ್ಯಪ್ನಗರ

ಕಾರು ಡಿವೈಡರ್‌ಗೆ ಡಿಕ್ಕಿ: ತಂದೆ- ಮಗ ಸಾವು

ಸಿಂಧನೂರು ಹೊರವಲಯದ ರಾಘವೇಂದ್ರ ರೈಸ್ ಮಿಲ್ ಬಳಿ ಘಟನೆ ನಡೆದಿದ್ದು, ಚಾಲಕನ ನಿರ್ಲಕ್ಷದಿಂದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.

Vijaya Karnataka Web 11 Jan 2019, 1:21 pm
ರಾಯಚೂರು: ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ತಂದೆ- ಮಗ ದುರಂತ ಸಾವನ್ನಪ್ಪಿದ ದಾರುಣ ಘಟನೆ ಸಿಂಧನೂರು ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
Vijaya Karnataka Web Death


ಸಿಂಧನೂರು ಹೊರವಲಯದ ರಾಘವೇಂದ್ರ ರೈಸ್ ಮಿಲ್ ಬಳಿ ಘಟನೆ ನಡೆದಿದ್ದು, ಚಾಲಕನ ನಿರ್ಲಕ್ಷದಿಂದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.

ಮೃತರನ್ನು ರಾಯಚೂರಿನ ನಿವಾಸಿಗಳಾದ ಹನೀಫ್ ಖುರೇಷಿ (60) ಮತ್ತು ಅವರ ಪುತ್ರ ಅಬ್ದುಲ್ಲಾ (16) ಎಂದು ಗುರುತಿಸಲಾಗಿದ್ದು ಘಟನೆ ನಡೆದ ಸ್ಥಳದಲ್ಲೇ ಇಬ್ಬರು ಸಾವು ಕಂಡಿದ್ದಾರೆ.

ಗಾಯಗೊಂಡಿರುವ ಅಖ್ತರಾ ಬಾನು (50) ಮತ್ತು ಕಾರು ಚಾಲಕ ಅಬ್ದುಲ್ ಲತೀಫ್ (36) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿಂಧನೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ