ಆ್ಯಪ್ನಗರ

‘ಡೆಂಗೆ ಜ್ವರ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿ’

ಮನೆಯ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡು, ನೀರು ಒಂದೆಡೆ ಸಂಗ್ರಹವಾಗದಂತೆ ನೋಡಿಕೊಳ್ಳುವ ಮೂಲಕ ಸಾರ್ವಜನಿಕರು ಡೆಂಗೆ ಜ್ವರ ಹರಡದಂತೆ ಜಾಗೃತಿವಹಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಕ್ಷ್ಮೀಬಾಯಿ ಹೇಳಿದರು.

Vijaya Karnataka 28 Jul 2018, 5:00 am
ರಾಯಚೂರು : ಮನೆಯ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡು, ನೀರು ಒಂದೆಡೆ ಸಂಗ್ರಹವಾಗದಂತೆ ನೋಡಿಕೊಳ್ಳುವ ಮೂಲಕ ಸಾರ್ವಜನಿಕರು ಡೆಂಗೆ ಜ್ವರ ಹರಡದಂತೆ ಜಾಗೃತಿವಹಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಕ್ಷ್ಮೀಬಾಯಿ ಹೇಳಿದರು.
Vijaya Karnataka Web BLR-BLY26HDLP3


ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿ.ಪಂ. ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ 'ಡೆಂಗೆ ವಿರೋಧಿ ಮಾಸಾಚರಣೆ'ಯ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜ್ವರ ಬರುವುದು ಹೀಗೆ: ''ಡೆಂಗೆ ಜ್ವರವು ವೈರಸ್‌ನಿಂದ ಉಂಟಾಗುವ ಕಾಯಿಲೆಯಾಗಿದೆ. ಸೋಂಕು ಹೊಂದಿದ ಈಡಿಸ್‌ ಇಜಿಪ್ಟೆ ಸೊಳ್ಳೆ ಕಚ್ಚುವಿಕೆಯಿಂದ ರೋಗ ಹರಡುತ್ತದೆ. ಈ ಸೊಳ್ಳೆಯು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತದೆ. ಈ ಸೊಳ್ಳೆಗಳು ಹಗಲಿನಲ್ಲಿ ಕಚ್ಚುತ್ತವೆ. ಡೆಂಗೆ ಜ್ವರದ ವಿರುದ್ಧ ನಿರಂತರವಾಗಿ ಇಡೀ ದೇಶ ಹೋರಾಡುತ್ತಿದೆ'' ಎಂದರು.

ಜಿಲ್ಲಾ ರೋಗವಾಹಕ ಆ]ತ ರೋಗಗಳ ನಿಯಂತ್ರಣಾಧಿಕಾರಿ ಡಾ.ವಿಜಯಾ ಕೆ.ಮಾತನಾಡಿ, ''ರಾಯಚೂರು ಜಿಲ್ಲಾದ್ಯಂತ ಡೆಂಗೆ ವಿರೋಧಿ ಮಾಸಾಚರಣೆ, ಜೂನ್‌ನಿಂದ ಆಗಸ್ಟ್‌ವರೆಗೆ ಆಚರಿಸಲಾಗುತ್ತಿದೆ. ಎಲ್ಲ ನಗರ ಪ್ರದೇಶಗಳಲ್ಲಿ ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶುಕ್ರವಾರದಂದು ಮನೆ ಮನೆಗೆ ಭೇಟಿ ನೀಡಿ ನೀರು ಸಂಗ್ರಹಣಾ ಸಾಮಗ್ರಿಗಳನ್ನು ಪರಿಶೀಲಿಸುವ ಜತೆಗೆ ಲಾರ್ವಾ ಸಮೀಕ್ಷೆ ಹಾಗೂ ಡೆಂಗೆ ಜ್ವರದ ಕುರಿತು ಮಾಹಿತಿ ನೀಡುತ್ತಿದ್ದಾರೆ. ಸಾರ್ವಜನಿಕರು ಎಳನೀರಿನ ಚಿಪ್ಪು, ಟೈರುಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು, ಮೈತುಂಬ ಬಟ್ಟೆ ಧರಿಸುವುದು, ಮಲಗುವಾಗ ಸೊಳ್ಳೆಪರದೆ ಉಪಯೋಗಿಸುವುದು ಹಾಗೂ ನೀರು ಸಂಗ್ರಹಣಾ ಸಾಮಗ್ರಿಗಳನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ತಿಕ್ಕಿ, ತೊಳೆದು, ಒಣಗಿಸಿ ನಂತರ ನೀರು ತುಂಬುವುದನ್ನು ರೂಢಿಸಿಕೊಳ್ಳಬೇಕು'' ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕ್ಷ ಯರೋಗ ನಿಯಂತ್ರಣಾಧಿಕಾರಿ ಡಾ.ಸುರೇಂದ್ರ ಬಾಬು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ವಿದ್ಯಾ, ರಾಮಸ್ವಾಮಿ, ಜಿಲ್ಲಾ ಆರೋಗ್ಯ ಶಿಕ್ಷ ಣಾಧಿಕಾರಿಗಳು, ನಗರ ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದ ಪ್ರಶಿಕ್ಷ ಣಾರ್ಥಿಗಳು ಮತ್ತು ಕಾರ್ಯಕ್ರಮದ ಎಲ್ಲ ಸಿಬ್ಬಂದಿ ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ