ಆ್ಯಪ್ನಗರ

ಡಿಸೆಂಬರ್‌ವೇಳೆಗೆ ಖಾಲಿ ಹುದ್ದೆ ಭರ್ತಿ

ನೀತಿ ಆಯೋಗದ ಮಹತ್ವಾಕಾಂಕ್ಷೆ ಜಿಲ್ಲೆಗಳ ಸುಸ್ಥಿರ ಅಭಿವೃದ್ಧಿಗೆ ದೀರ್ಘಾವಧಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ...

Vijaya Karnataka 8 Oct 2019, 3:10 pm
ರಾಯಚೂರು: ನೀತಿ ಆಯೋಗದ ಮಹತ್ವಾಕಾಂಕ್ಷೆ ಜಿಲ್ಲೆಗಳ ಸುಸ್ಥಿರ ಅಭಿವೃದ್ಧಿಗೆ ದೀರ್ಘಾವಧಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿಖಾಲಿ ಇರುವ ಹುದ್ದೆಗಳ ಭರ್ತಿಗೆ ಡಿಸೆಂಬರ್‌ವರೆಗೆ ಗಡುವು ನೀಡಲಾಗಿದೆ ಎಂದು ರಾಜ್ಯ ಯೋಜನಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌ ಹೇಳಿದರು.
Vijaya Karnataka Web fill in the vacancy by december
ಡಿಸೆಂಬರ್‌ವೇಳೆಗೆ ಖಾಲಿ ಹುದ್ದೆ ಭರ್ತಿ


ಅವರು ನಗರದಲ್ಲಿಶುಕ್ರವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದರು.

ಆರೋಗ್ಯ, ಶಿಕ್ಷಣ ಸೇರಿ ಆರು ಕ್ಷೇತ್ರಗಳಲ್ಲಿಯಾವ ರೀತಿಯ ಅಭಿವೃದ್ಧಿ ಜಾರಿಗೆ ತರಬೇಕೆಂಬ ಬಗ್ಗೆ ನಗರದಲ್ಲಿನಡೆಯುತ್ತಿರುವ ಎರಡು ದಿನಗಳ ಕಾರ್ಯಾಗಾರದಲ್ಲಿಯೋಜನೆ ರೂಪಿಸುವ ಬಗ್ಗೆ ಚರ್ಚಿಸಿ ವರದಿ ಸಿದ್ಧಪಡಿಸಲಾಗುವುದು ಎಂದರು.

ನಿರ್ಧಾರ: ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿ ಈಗಾಗಲೇ ಸಿಎಂ ಯಡಿಯೂರಪ್ಪ ಅವರು ಎಲ್ಲಇಲಾಖೆಗಳ ಪ್ರಧಾನ ಕಾರ್ಯ ದರ್ಶಿಗಳ ಹಾಗೂ ಚೀಫ್‌ ಸೆಕ್ರೆಟರಿ ಜತೆಗೆ ಸಭೆ ನಡೆಸಿದ್ದು ಹುದ್ದೆಗಳ ನೇರ ಭರ್ತಿ ಸೇರಿ ನಾನಾ ರೀತಿಯಿಂದ ನೇಮಕ ಪ್ರಕ್ರಿಯೆ ಕೈಗೊಳ್ಳಲು ಡಿಸೆಂಬರ್‌ವರೆಗೆ ಗಡುವು ನೀಡಿದ್ದಾರೆಂದರು. ಮಹತ್ವಾಕಾಂಕ್ಷೆ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಒಟ್ಡು 500 ಕೋಟಿ ರೂ. ಗಳ ಕಾರ್ಯಕ್ರಮ ರೂಪಿಸಲಾಗುತ್ತಿದ್ದು, ಕೇಂದ್ರ, ರಾಜ್ಯ ಸರಕಾರಗಳ ಅನುದಾನ ಕ್ರೋಢೀಕರಿಸಿ ಜನರ ಸಹಯೋಗದೊಂದಿಗೆ ಕಾರ್ಯಕ್ರಮ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ