ಆ್ಯಪ್ನಗರ

ಪ್ರವಾಹದಿಂದ 8,700 ಕೋಟಿ ರೂ. ಹಾನಿ, ಕೇಂದ್ರದಿಂದ 325 ಕೋಟಿ ಪರಿಹಾರ -ಆರ್‌ ಅಶೋಕ್‌

ಪ್ರವಾಹ ಪರಿಹಾರಕ್ಕೆ ಹೆಚ್ಚಿನ ಅನುದಾನ ಕೋರಲು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ನಾಳೆ ಅಂದರೆ ಗುರುವಾರ ದಿಲ್ಲಿಗೆ ಹೋಗಲಿದ್ದಾರೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಮಾಹಿತಿ ನೀಡಿದ್ದಾರೆ.

Vijaya Karnataka 16 Sep 2020, 6:55 pm
ರಾಯಚೂರು: ರಾಜ್ಯದಲ್ಲಿ ಉಂಟಾದ ಪ್ರವಾಹದಲ್ಲಿ 8,700 ಕೋಟಿ ರೂಪಾಯಿ ಮೌಲ್ಯದ ಆಸ್ತಿ-ಪಾಸ್ತಿಗೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದರು.
Vijaya Karnataka Web R Ashok


ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎನ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ ರಾಜ್ಯಕ್ಕೆ 643 ಕೋಟಿ ರೂಪಾಯಿ ಹಣ ಬರಬೇಕಿತ್ತು. ಈ ಸಂಬಂಧ ಕೇಂದ್ರ ಸರಕಾರ ಈಗಾಗಲೇ 325 ಕೋಟಿ ರೂಪಾಯಿ ಹಣ ನೀಡಿದೆ. ಜನರಿಗೆ ಪರಿಹಾರ ನೀಡಲು ಸರಕಾರಕ್ಕೆ ಯಾವುದೇ ಹಣದ ಕೊರತೆ ಇಲ್ಲ ಎಂದು ತಿಳಿಸಿದರು.

ನಾಳೆ (ಗುರುವಾರ) ಮುಖ್ಯಮಂತ್ರಿಗಳು ಪ್ರವಾಹಕ್ಕೆ ಹೆಚ್ಚಿನ ಅನುದಾನ ಕೋರಲು ದಿಲ್ಲಿಗೆ ಹೋಗಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು. ಎರಡನೇ ಹಂತದ ಮಳೆ ಹಾನಿಯ ಬಗ್ಗೆಯೂ ಸಮೀಕ್ಷೆ ನಡೆಸಲಾಗುವುದು ಎಂದು ಆರ್‌ ಅಶೋಕ್‌ ಭರವಸೆ ಇತ್ತರು.

ಇನ್ನು ಜನರು ಹಾಗೂ ಜನಪ್ರತಿನಿಧಿಗಳ ಒತ್ತಾಯದ ಹಿನ್ನಲೆಯಲ್ಲಿ ಅರಕೇರಾ ತಾಲೂಕು ಘೋಷಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮುದಗಲ್ ಹಾಗು ಗಬ್ಬೂರು ತಾಲೂಕು ಕೇಂದ್ರದ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಹೊಸದಾಗಿ ನಿರ್ಮಾಣವಾಗುತ್ತಿರುವ ರಾಯಚೂರು ಜಿಲ್ಲಾಡಳಿತ ಭವನ ದೂರವಾಗುತ್ತದೆ ಎಂಬ ಕಾರಣಕ್ಕೆ ಸ್ಥಳ ಬದಲಾವಣೆಯ ಬಗ್ಗೆ ಪರಿಶೀಲಿಸಲಾಗುವುದು ಎಂದೂ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ