ರಾಯಚೂರು: ಮಹಾರಾಷ್ಟ್ರ ಹಾಗೂ ರಾಜ್ಯದ ನಾನಾ ಕಡೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ನದಿಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಶನಿವಾರವೂ ಮುಂದುವರಿದಿತ್ತು. ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಿಲ್ಲಾಧಿಕಾರಿ ಡಾ.ಸತೀಶ್ ಹಾಗೂ ಇತರ ಅಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಲಿಂಗಸುಗೂರು ಬಳಿಯ ನಾರಾಯಣಪುರ ಜಲಾಶಯದಿಂದ ಹರಿಸಲಾಗುತ್ತಿರುವ ಭಾರಿ ಪ್ರಮಾಣದ ನೀರು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟು ಮಾಡಿದೆ. ನದಿ ದಂಡೆಯ ಗದ್ದೆಗಳಿಗೆ ನೀರು ನುಗ್ಗಿದ್ದು ರೈತರು ಬೆಳೆ ನಷ್ಟ ಆತಂಕಕ್ಕೆ ಸಿಲುಕಿದ್ದಾರೆ. ಅದೇ ತಾಲೂಕಿನ ಶೀಲಹಳ್ಳಿ ಸೇತುವೆ ಸತತ ಎರಡನೇ ದಿನವೂ ನೀರಿನಲ್ಲಿ ಮುಳುಗಿದೆ. ಹಂಚಿನಾಳ, ಯರಗೋಡಿ ಸೇರಿ ಸುತ್ತಲಿನ ಗ್ರಾಮಗಳ ಜನತೆ ಸುತ್ತು ಬಳಸಿ ಜಲದುರ್ಗದ ಮೂಲಕ ಸಂಚರಿಸುವಂತಾಗಿದೆ. ಮತ್ತೊಂದೆಡೆ ದೇವದುರ್ಗ-ಕಲಬುರಗಿ ಮಧ್ಯೆ ಸಂಪರ್ಕ ಕಲ್ಪಿಸುವ ಹೂವಿನಹೆಡಗಿ ಸೇತುವೆ ಮೇಲೆ ಕೃಷ್ಣಾ ನದಿ ನೀರು ಹರಿಯುತ್ತಿದ್ದು, ಈ ಮಾರ್ಗದಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ತಿಂಥಣಿ ಸೇತುವೆಯ ಮೂಲಕ ಸಂಚರಿಸುವ ಅನಿವಾರ್ಯತೆಯಿದೆ.
ಕೊಪ್ಪರ ದೇಗುಲ ಸುತ್ತುವರಿದ ಕೃಷ್ಣಾ
ದೇವದುರ್ಗ ತಾಲೂಕಿನ ಕೊಪ್ಪರ ಗ್ರಾಮದ ಶ್ರೀನರಸಿಂಹ ದೇವರ ದೇವಸ್ಥಾನವು ಕೃಷ್ಣಾ ನದಿ ಪ್ರವಾಹದಿಂದ ಸುತ್ತುವರಿದಿದ್ದು ಪೂಜಾ ಕೈಂಕರ್ಯ ಹಾಗೂ ಧಾರ್ಮಿಕ ಕಾರ್ಯಗಳಿಗೆ ತೊಡಕಾಗಿದೆ. ನಾರಾಯಣಪುರ ಜಲಾಶಯದಿಂದ ಶನಿವಾರ ಮಧ್ಯಾಹ್ನ 3.44 ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಜಲಾಶಯಕ್ಕೆ 2.95 ಲಕ್ಷ ಕ್ಯೂಸೆಕ್ ನೀರು ಒಳಹರಿವಿತ್ತು. ಜಲಾಶಯದಲ್ಲಿ ಸದ್ಯ 489.79 ಮೀಟರ್ ನೀರಿದೆ. ಗರಿಷ್ಠ ಮಟ್ಟ 492.25 ಮೀಟರ್. ಸದ್ಯ 23.24 ಟಿಎಂಸಿ ನೀರಿನ ಸಂಗ್ರಹವಿದೆ. ಗರಿಷ್ಠ 33.31 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನು ಜಲಾಶಯ ಹೊಂದಿದೆ.
ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಡಿಸಿ
ಜಿಲ್ಲಾಧಿಕಾರಿ ಡಾ.ಸತೀಶ್ ಅವರು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ಅವರು ಹೂವಿನಹೆಡಗಿ ಸೇತುವೆ ಪರಿಶೀಲಿಸಿದರು. ನದಿ ತೀರದ ಹೊಲಗದ್ದೆಗಳಿಗೆ ನೀರು ಹೊಕ್ಕಿದ್ದನ್ನು ವೀಕ್ಷಿಸಿ ರೈತರ ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚಿಸಿದರು. ನಂತರ ಅವರು ತಿಂಥಣಿ ಬ್ರಿಡ್ಜ್ ದುರಸ್ತಿ ಕಾಮಗಾರಿ ಪರಿಶೀಲಿಸಿದರು. ಈ ವೇಳೆ ಎಡಿಸಿ ದುರುಗೇಶ್, ಸಹಾಯಕ ಆಯುಕ್ತ ಸಂತೋಷ್ ಕಾಮಗೌಡ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.
ಕೊಪ್ಪರ ದೇಗುಲ ಸುತ್ತುವರಿದ ಕೃಷ್ಣಾ
ದೇವದುರ್ಗ ತಾಲೂಕಿನ ಕೊಪ್ಪರ ಗ್ರಾಮದ ಶ್ರೀನರಸಿಂಹ ದೇವರ ದೇವಸ್ಥಾನವು ಕೃಷ್ಣಾ ನದಿ ಪ್ರವಾಹದಿಂದ ಸುತ್ತುವರಿದಿದ್ದು ಪೂಜಾ ಕೈಂಕರ್ಯ ಹಾಗೂ ಧಾರ್ಮಿಕ ಕಾರ್ಯಗಳಿಗೆ ತೊಡಕಾಗಿದೆ. ನಾರಾಯಣಪುರ ಜಲಾಶಯದಿಂದ ಶನಿವಾರ ಮಧ್ಯಾಹ್ನ 3.44 ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಜಲಾಶಯಕ್ಕೆ 2.95 ಲಕ್ಷ ಕ್ಯೂಸೆಕ್ ನೀರು ಒಳಹರಿವಿತ್ತು. ಜಲಾಶಯದಲ್ಲಿ ಸದ್ಯ 489.79 ಮೀಟರ್ ನೀರಿದೆ. ಗರಿಷ್ಠ ಮಟ್ಟ 492.25 ಮೀಟರ್. ಸದ್ಯ 23.24 ಟಿಎಂಸಿ ನೀರಿನ ಸಂಗ್ರಹವಿದೆ. ಗರಿಷ್ಠ 33.31 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನು ಜಲಾಶಯ ಹೊಂದಿದೆ.
ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಡಿಸಿ
ಜಿಲ್ಲಾಧಿಕಾರಿ ಡಾ.ಸತೀಶ್ ಅವರು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ಅವರು ಹೂವಿನಹೆಡಗಿ ಸೇತುವೆ ಪರಿಶೀಲಿಸಿದರು. ನದಿ ತೀರದ ಹೊಲಗದ್ದೆಗಳಿಗೆ ನೀರು ಹೊಕ್ಕಿದ್ದನ್ನು ವೀಕ್ಷಿಸಿ ರೈತರ ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚಿಸಿದರು. ನಂತರ ಅವರು ತಿಂಥಣಿ ಬ್ರಿಡ್ಜ್ ದುರಸ್ತಿ ಕಾಮಗಾರಿ ಪರಿಶೀಲಿಸಿದರು. ಈ ವೇಳೆ ಎಡಿಸಿ ದುರುಗೇಶ್, ಸಹಾಯಕ ಆಯುಕ್ತ ಸಂತೋಷ್ ಕಾಮಗೌಡ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.