ಆ್ಯಪ್ನಗರ

ಗೌರಿ ಲಂಕೇಶ್‌ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಧರಣಿ

ಗೌರಿ ಲಂಕೇಶ್‌ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಧರಣಿ ವಿಕ ಸುದ್ದಿಲೋಕ, ರಾಯಚೂರು ವಿಚಾರವಾದಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಅವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ...

ವಿಕ ಸುದ್ದಿಲೋಕ 7 Oct 2017, 5:00 am

ರಾಯಚೂರು: ವಿಚಾರವಾದಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಅವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂಬುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಶುಕ್ರವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ(ದಾದಾಸಾಹೇಬ್‌ ಎನ್‌.ಮೂರ್ತಿ ಬಣ) ಪದಾಧಿಕಾರಿಗಳು ಧರಣಿ ನಡೆಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಹೋರಾಟಗಾರರು ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ರವಾನಿಸಿ, ಗೌರಿ ಲಂಕೇಶ್‌ ಸೇರಿದಂತೆ ಅನೇಕ ವಿಚಾರವಾದಿಗಳನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಸರಕಾರಗಳು ನಿರ್ಲಕ್ಷ್ಯ ತೋರುತ್ತಿವೆ. ಅದರಿಂದಾಗಿಯೇ ಅಂಥ ಘಟನೆಗಳು ಮರುಕಳಿಸುತ್ತಿವೆ ಎಂದು ಟೀಕಿಸಿದರು.

ವಿಚಾರವಾದಿಗಳ ಹತ್ಯೆ ಹಿನ್ನೆಲೆಯ ಕೈವಾಡ ಪತ್ತೆ ಮಾಡುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ತನಿಖೆಯನ್ನು ಚುರುಕುಗೊಳಿಸಲು ಸರಕಾರ ಮುಂದಾಗಬೇಕು. ದೇಶವನ್ನು ಅಸಹಿಷ್ಣುತೆಯ ಗಂಡಾಂತರದಿಂದ ಪಾರು ಮಾಡಬೇಕು. ಭ್ರಾತೃತ್ವದ ತಳಹದಿಯಲ್ಲಿ ಶಾಂತಿ ನೆಲೆಸುವಂತೆ ಮಾಡುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಯುದ್ಧ, ಭಯೋತ್ಪಾದನೆ ಅಟ್ಟಹಾಸದ ಮೂಲಕ ದೇಶವನ್ನು ಅಭದ್ರತೆಗೆ ಕೊಂಡೊಯ್ಯುತ್ತಿರುವ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲು ಎಲ್ಲರೂ ಒಂದಾಗಬೇಕಿದೆ. ವಿಚಾರವಾದಿಗಳಿಗೆ ಸೂಕ್ತ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಸರಕಾರಗಳು ಕೂಡಲೇ ಮುಂದಾಗಬೇಕು. ವಿಚಾರವಾದಿಗಳನ್ನು ಹತ್ಯೆ ಮಾಡಿದವರನ್ನು ಬಂಧಿಸುವಲ್ಲಿ ಆಗುತ್ತಿರುವ ವಿಳಂಬದಿಂದ ಆರೋಪಿಗಳು ಮತ್ತಷ್ಟು ಇಂಥ ಘಟನೆಗಳಿಗೆ ಕಾರಣರಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದರು.

ವಿಚಾರವಾದಿಗಳ ಹತ್ಯೆ ಮಾಡಿದವರ ಪತ್ತೆಗೆ ವಿಶೇಷ ತನಿಖಾ ದಳ ರಚಿಸಬೇಕು. ಸೂಕ್ತ ತರಬೇತಿಯ ಮೂಲಕ ಈ ರೀತಿಯ ಕೃತ್ಯಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ಹೋರಾಟಗಾರರು ಸರಕಾರವನ್ನು ಒತ್ತಾಯಿಸಿದರು. ಈ ಸಂದರ್ಭ ಸಂಘಟನೆಯ ಜಿಲ್ಲಾಧ್ಯಕ್ಷ ಅಶೋಕ ನಂಜಲದಿನ್ನಿ, ಪ್ರಮುಖರಾದ ರಾಜು ಬೊಮ್ಮನಾಳ್‌, ತಿಮ್ಮಣ್ಣ ಅಲಬನೂರು, ಬಸವರಾಜ ಸಾಸಲಮರಿ ಸೇರಿದಂತೆ ಅನೇಕರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ