ಆ್ಯಪ್ನಗರ

ಊಟ ಬಿಟ್ಟು ವಿದ್ಯಾರ್ಥಿನಿಯರ ಪ್ರತಿಭಟನೆ

ವಾರ್ಡನ್‌ ಪತಿ ಬಾಲಕಿಯರ ವಸತಿ ನಿಲಯ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿತ್ತಾರೆ ಎಂದು ಆರೋಪಿಸಿ ಮಂಗಳವಾರ ತಡ ರಾತ್ರಿ ಪರಿಶಿಷ್ಟ ಜಾತಿ ಬಾಲಕಿಯರ ಮೆಟ್ರಿಕ್‌ ನಂತರದ ವಸತಿ ನಿಲಯ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

Vijaya Karnataka 16 May 2019, 5:00 am
ದೇವದುರ್ಗ : ವಾರ್ಡನ್‌ ಪತಿ ಬಾಲಕಿಯರ ವಸತಿ ನಿಲಯ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿತ್ತಾರೆ ಎಂದು ಆರೋಪಿಸಿ ಮಂಗಳವಾರ ತಡ ರಾತ್ರಿ ಪರಿಶಿಷ್ಟ ಜಾತಿ ಬಾಲಕಿಯರ ಮೆಟ್ರಿಕ್‌ ನಂತರದ ವಸತಿ ನಿಲಯ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
Vijaya Karnataka Web girls protest outside
ಊಟ ಬಿಟ್ಟು ವಿದ್ಯಾರ್ಥಿನಿಯರ ಪ್ರತಿಭಟನೆ


ನಗರದ ನುಸ್ರತ ಕಾಲೊನಿ ಬಾಡಿಗೆ ಕಟ್ಟಡದಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಪರಿಶಿಷ್ಟ ಜಾತಿ ಮೆಟ್ರಿಕ್‌ ನಂತರದ ವಸತಿ ನಿಲಯವಿದೆ. ಇದರ ಮೇಲ್ವಿಚಾರಕಿ ಲೀಲಾವತಿ ಅವರ ಪತಿ ಬಸವರಾಜ ಅಕ್ಕರಕಿ ಅವರು ಹೊತ್ತು ಗೊತ್ತಿಲ್ಲದೇ ರಾತ್ರಿ ವೇಳೆ ವಸತಿ ನಿಲಯ ಪ್ರವೇಶಿಸುತ್ತಾರೆ. ಈ ಸಮಯದಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಆರೋಪಿಸಿ ರಾತ್ರಿ ಊಟ ತ್ಯಜಿಸಿ ದಿಢೀರ್‌ ಪ್ರತಿಭಟನೆ ನಡೆಸಿದರು. ಬಾಲಕಿಯರ ವಸತಿ ನಿಲಯಕ್ಕೆ ಪುರುಷರ ಪ್ರವೇಶ ನಿರ್ಬಂಧವಿದೆ. ಆದರೆ, ವಾರ್ಡನ್‌ ಲೀಲಾವತಿ ಅವರು, ತಮ್ಮ ಪತಿಗೆ ಪ್ರವೇಶ ಕಲ್ಪಿಸಿಕೊಟ್ಟಿದ್ದಾರೆ ಎಂದು ದೂರಿದರು. ಸಿಸಿಟಿವಿ ದೃಶ್ಯಾವಳಿಯಲ್ಲಿ ತಮಗೆ ಬೇಕಾದದ್ದನ್ನು ಇಟ್ಟುಕೊಂಡು ಉಳಿದಿದ್ದನ್ನು ಡಿಲಿಟ್‌ ಮಾಡುತ್ತಾರೆ ಎಂದು ಆರೋಪಿಸಿದರು.

ಜಿಲ್ಲಾ ಅಧಿಕಾರಿ ಭೇಟಿ: ಮಂಗಳವಾರ ರಾತ್ರಿ ನಡೆದ ದಿಢೀರ್‌ ಪ್ರತಿಭಟನೆ ಹಿನ್ನೆಲೆಯಲ್ಲಿ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಬುಧವಾರ ಹಾಸ್ಟೆಲ್‌ಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಅಹವಾಲು ಆಲಿಸಿದರು. ಸುಮಾರು ಒಂದೂವರೆ ತಾಸು ವಿದ್ಯಾರ್ಥಿನಿಯರ ಜತೆ ಮಾತುಕತೆ ನಡೆಸಿದರು. ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿತ್ತು. ಈ ವೇಳೆ ವಿದ್ಯಾರ್ಥಿನಿಯರ ಮೇಲೆ ಜಿಲ್ಲಾ ಅಧಿಕಾರಿ ಪ್ರಶಾಂತ ಒತ್ತಡ ಹೇರಿದ್ದಾರೆಂಬ ದೂರು ಕೇಳಿಬಂದಿವೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಲೀಲಾವತಿ ಅವರನ್ನು ವರ್ಗಾವಣೆ ಮಾಡಿ ಎರಡ್ಮೂರು ದಿನಗಳಲ್ಲಿ ಬೇರೆ ವಾರ್ಡ್‌ನ್‌ ನೇಮಕ ಮಾಡಿ ಆದೇಶ ಹೊರಡಿಸಲಾಗುತ್ತದೆ ಎಂದು ಭರವಸೆ ನೀಡಿದರು.

...

ದೇವದುರ್ಗದಲ್ಲಿ ಶಿಕ್ಷ ಕರೇ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ನಿಲಯ ವಾರ್ಡನ್‌ಗಳಾಗಿದ್ದಾರೆ. ಬೋಧಕೇತರ ಕೆಲಸಗಳಿಗೆ ಶಿಕ್ಷ ಕರನ್ನು ನೇಮಿಸಬಾರದು ಎಂದು ನ್ಯಾಯಾಲಯದ ಆದೇಶವಿದೆ. ಆದರೂ, ಹಾಸ್ಟೆಲ್‌ಗೆ ನೇಮಿಸುವುದನ್ನು ಕೈ ಬಿಡಬೇಕು.

- ಶಬ್ಬೀರ್‌ ಜಾಲಹಳ್ಳಿ, ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷ , ಜಾಲಹಳ್ಳಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ