ಆ್ಯಪ್ನಗರ

ಕಾಂಗ್ರೆಸ್ -ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ: ಜುಟಮರಡಿಯಲ್ಲಿ ಪೊಲೀಸರಿಂದ ಲಘು ಲಾಠಿ ಪ್ರಹಾರ!

ಗ್ರಾ.ಪಂ. ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ದೇವದುರ್ಗ ತಾಲೂಕಿನ ಜುಟಮರಡಿ ಗ್ರಾಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಬೆಂಬಲಿಗರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಘಟನೆ ವೇಳೆ ಉದ್ರಿಕ್ತರು ಕಲ್ಲು ತೂರಿದ್ದರಿಂದ ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ. ಪೊಲೀಸ್ ಜೀಪ್ ಜಖಂ ಗೊಂಡಿದೆ. ​ ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

Vijaya Karnataka Web 22 Dec 2020, 1:13 pm
ರಾಯಚೂರು: ಗ್ರಾ.ಪಂ. ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು,ದೇವದುರ್ಗ ತಾಲೂಕಿನ ಜುಟಮರಡಿ ಗ್ರಾಮದಲ್ಲಿ‌ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಬೆಂಬಲಿಗರ ಮಧ್ಯೆ ವಾಗ್ವಾದ ಉಂಟಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ ಘಟನೆ ನಡೆದಿದೆ.
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ


ಜುಟಮರಡಿ ಗ್ರಾಮದಲ್ಲಿ ಮತಗಟ್ಟೆಯಿಂದ 100ಮೀಟರ್ ಅಂತರದೊಳಗೆ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಿಂತಿದ್ದಕ್ಕೆ ವಾಗ್ವಾದ ಉಂಟಾಗಿತ್ತು. ಘಟನೆ ವೇಳೆ ಉದ್ರಿಕ್ತರು ಕಲ್ಲು ತೂರಿದ್ದರಿಂದ ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ. ಗಾಯಾಳು ಪೊಲೀಸ್ ಸಿಬ್ಬಂದಿಗಳನ್ನು ಚಿಕಿತ್ಸೆಗೆ ದೇವದುರ್ಗಕ್ಕೆ ರವಾನೆ ಮಾಡಲಾಗಿದೆ. ಕಲ್ಲು ತೂರಾಟದಿಂದ ಪೊಲೀಸ್ ಜೀಪ್ ಜಖಂಗೊಂಡಿದೆ.

ಮತಗಟ್ಟೆಯಿಂದ 100 ಮೀಟರ್ ಅಂತರದೊಳಗೆ ನಡೆದ ಗಲಾಟೆ ಹಿನ್ನೆಲೆ ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಮತಗಟ್ಟೆಯಲ್ಲಿ ಜಿ.ಪಂ ಸದಸ್ಯೆ ಕಿರಿಕ್; ಬೆಂಬಲಿಗರಿಗೆ ಲಾಠಿ ಬೀಸಿದ ಪೊಲೀಸ್

ಘಟನೆ ಹಿನ್ನಲೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸ್ಥಳಕ್ಕೆ ಲಿಂಗಸುಗೂರು ಡಿವೈಎಸ್ಪಿ ಎಸ್.ಎಸ್. ಹುಲ್ಲೂರ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸದ್ಯ ಪರಿಸ್ಥಿತಿ ತಿಳಿಯಾಗಿದೆ ಎಂದು ತಿಳಿದು ಬಂದಿದೆ.
ರಾಮನಗರದಲ್ಲಿ ರಾಜಕೀಯ ಪಕ್ಷಗಳಿಂದ ಮತದಾರರ ಓಲೈಕೆ: ಮೊಬೈಲ್, ತೆಂಗಿನ ಸಸಿ ಗಿಫ್ಟ್!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ