ಆ್ಯಪ್ನಗರ

ಆರೋಗ್ಯ ಸೇವೆ, ಖಾಸಗಿ ಆಸ್ಪತ್ರೆಯೊಂದಿಗೆ ಒಪ್ಪಂದ: ಸಚಿವ

ರಾಜ್ಯದಲ್ಲಿರುವ ಇಎಸ್‌ಐ ಆಸ್ಪತ್ರೆಗಳಲ್ಲಿ ಕಾರ್ಮಿಕರಿಗೆ ಎಲ್ಲ ಆರೋಗ್ಯ ಸೇವೆಗಳು ದೊರೆಯುವಂತೆ ಮಾಡಲು ಖಾಸಗಿ ಆಸ್ಪತ್ರೆಗಳೊಂದಿಗೆ ಹಾಗೂ ಸರಕಾರಿ ವೈದ್ಯಕೀಯ ಕಾಲೇಜುಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸರಕಾರ ನಿರ್ಧರಿಸಿದೆ ಎಂದು ಕಾರ್ಮಿಕ ಸಚಿವ ವೆಂಕಟರಮಣಪ್ಪ ಹೇಳಿದರು.

Vijaya Karnataka 6 Sep 2018, 12:00 am
ರಾಯಚೂರು; ರಾಜ್ಯದಲ್ಲಿರುವ ಇಎಸ್‌ಐ ಆಸ್ಪತ್ರೆಗಳಲ್ಲಿ ಕಾರ್ಮಿಕರಿಗೆ ಎಲ್ಲ ಆರೋಗ್ಯ ಸೇವೆಗಳು ದೊರೆಯುವಂತೆ ಮಾಡಲು ಖಾಸಗಿ ಆಸ್ಪತ್ರೆಗಳೊಂದಿಗೆ ಹಾಗೂ ಸರಕಾರಿ ವೈದ್ಯಕೀಯ ಕಾಲೇಜುಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸರಕಾರ ನಿರ್ಧರಿಸಿದೆ ಎಂದು ಕಾರ್ಮಿಕ ಸಚಿವ ವೆಂಕಟರಮಣಪ್ಪ ಹೇಳಿದರು.
Vijaya Karnataka Web RAC-RCH05JD01


ಅವರು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇಎಸ್‌ಐ ಆಸ್ಪತ್ರೆಗಳಲ್ಲಿ ವೈದ್ಯರು ಸೇರಿದಂತೆ ಮತ್ತಿತರ ಸಿಬ್ಬಂದಿ ಕೊರತೆಯಿರುವುದು ಗಮನಕ್ಕೆ ಬಂದಿದೆ. ಅತ್ಯಾಧುನಿಕ ಸೌಲತ್ತು ಒದಗಿಸುವ ಖಾಸಗಿ ಆಸ್ಪತ್ರೆಗಳ ಜತೆ ಒಪ್ಪಂದ ಮಾಡಿಕೊಂಡು ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಲು ಸರಕಾರ ಸಿದ್ಧತೆ ನಡೆಸಿದೆ ಎಂದರು.

ಮತ್ತೆ ಸಮೀಕ್ಷೆ:ರಾಜ್ಯದಲ್ಲಿ ಸದ್ಯ 17ಲಕ್ಷ ಕಾರ್ಮಿಕರಿದ್ದಾರೆಂಬುದು ಇಲಾಖೆಯ ಮಾಹಿತಿ. ಅದಕ್ಕಿಂತ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಇರುವ ಸಾಧ್ಯತೆ ಕಂಡುಬಂದಿರುವುದರಿಂದ ಮತ್ತೆ ಸಮೀಕ್ಷೆ ಕೈಗೊಳ್ಳಲು ನಿರ್ಧರಿಸಲಾಗಿದೆ. ಗ್ರಾಮೀಣ ಭಾಗದವರನ್ನೂ ಈ ಬಾರಿಯ ಸಮೀಕ್ಷೆ ವೇಳೆ ಪರಿಗಣಿಸಲಾಗುತ್ತದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂಬಂಧಿಸಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವ ಬಗ್ಗೆ ಕೇಳಿಬಂದಿರುವ ದೂರುಗಳನ್ನು ಇಲಾಖೆ ಗಂಭೀರವಾಗಿ ಪರಿಗಣಿಸಲಿದೆ. ಶೀಘ್ರವೇ ಕಾನೂನು ತೊಡಕು ನಿವಾರಿಸಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪೂರಕವಾಗಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.

ಅನ್ಯ ಕಾರ್ಯಕ್ಕೆ ಬಳಕೆಯಿಲ್ಲ; ರಾಜ್ಯ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿರುವ ಅನುದಾನವನ್ನು ಅನ್ಯ ಕಾರ್ಯಗಳಿಗೆ ಬಳಕೆ ಮಾಡಿರುವ ಬಗ್ಗೆ ಕೇಳಿಬಂದಿರುವ ಆರೋಪಗಳಲ್ಲಿ ಹುರುಳಿಲ್ಲ. ಅದೇ ಅನುದಾನದಲ್ಲಿ ಕಾರ್ಮಿಕರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮ ರೂಪಿಸಿ ಜಾರಿಗೆ ತರಲಾಗುತ್ತಿದೆ. ಕಾರ್ಮಿಕ ಇಲಾಖೆಯಲ್ಲಿ ಖಾಲಿಯಿರುವ ತಾಲೂಕು ಮಟ್ಟದಿಂದ ರಾಜ್ಯಮಟ್ಟದವರೆಗಿನ ಎಲ್ಲ ಹುದ್ದೆಗಳ ಭರ್ತಿಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಗ್ರಾಮೀಣ ಮಟ್ಟದಲ್ಲಿ ಕಾರ್ಮಿಕ ಬಂಧುಗಳನ್ನು ನೇಮಿಸಲಿದ್ದು, ನರೇಗಾ ಯೋಜನೆ ಅನುಷ್ಠಾನದತ್ತ ಕಾಳಜಿ ತೋರಲಿದ್ದಾರೆ ಎಂದರು.

ಕಾರ್ಮಿಕ ಇಲಾಖೆಯ ಆಯುಕ್ತ ಪಾಲಯ್ಯ ಸೇರಿದಂತೆ ಇಲಾಖೆಯ ಅಧಿಕಾರಿಗಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ