ಆ್ಯಪ್ನಗರ

ಜು.12ಕ್ಕೆ ವಿಚಾರಣೆ ಮುಂದೂಡಿಕೆ

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಇಲ್ಲಿನ 3ನೇ ಹೆಚ್ಚುವರಿ ನ್ಯಾಯಾಲಯ ಜು.12ಕ್ಕೆ ಮುಂದೂಡಿ ಆದೇಶಿಸಿದೆ.

Vijaya Karnataka 5 Jul 2019, 9:04 pm
ರಾಯಚೂರು : ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಇಲ್ಲಿನ 3ನೇ ಹೆಚ್ಚುವರಿ ನ್ಯಾಯಾಲಯ ಜು.12ಕ್ಕೆ ಮುಂದೂಡಿ ಆದೇಶಿಸಿದೆ.
Vijaya Karnataka Web inquiry adjournment on july 12
ಜು.12ಕ್ಕೆ ವಿಚಾರಣೆ ಮುಂದೂಡಿಕೆ


ಆರೋಪಿ ಸುದರ್ಶನ್‌ ಯಾದವ್‌ನನ್ನು ಕೋರ್ಟ್‌ಗೆ ಮಂಗಳವಾರ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶ ಅವಿನಾಶ ಗಾಳೆ ಅವರು ವಿಚಾರಣೆ ನಡೆಸಿದರು. ಮುಂದಿನ ಹಂತದ ವಿಚಾರಣೆಗಾಗಿ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಅಧಿಕಾರಿಗಳು ಕೋರಿದರು. ಆದರೆ, ಆರೋಪಿ ಪರ ವಕೀಲರು, ಸಿಐಡಿ ಅಧಿಕಾರಿಗಳ ವಶಕ್ಕೆ ನೀಡಲು ಒಪ್ಪಲಿಲ್ಲ. ವಾದ ಆಲಿಸಿದ ನ್ಯಾಯಾಧೀಶರು, ಜುಲೈ12ಕ್ಕೆ ವಿಚಾರಣೆ ಮುಂದೂಡಿದರು. ವಿಚಾರಣೆ ಬಳಿಕ ಆತನನ್ನು ಭದ್ರತೆಯೊಂದಿಗೆ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ಕರೆದೊಯ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ