ಆ್ಯಪ್ನಗರ

ಸುಳ್ಳು ಪ್ರಕರಣ ವಾಪಸ್‌ಗೆ ಪಡೆಯಲು ಒತ್ತಾಯ

ಅಮೆರಿಕನ್‌ ಟೆಲಿಕಾಂ ಟವರ್‌ ಕಾಪೋರ್‍ರೇಷನ್‌ ಕಂಪನಿಯ ಕಾರ್ಮಿಕರ ಮೇಲೆ ಹಾಕಿದ ಸುಳ್ಳು ಪ್ರಕರಣಗಳನ್ನು ಕೂಡಲೇ ವಾಪಸ್‌ ಪಡೆಯಬೇಕೆಂದು ಆಗ್ರಹಿಸಿ ಸೆಂಟರ್‌ ಆಫ್‌ ಇಂಡಿಯಾ ಟ್ರೇಡ್‌ ಯೂನಿಯನ್ಸ್‌ (ಸಿಐಟಿಯು) ಪದಾಧಿಕಾರಿಗಳು ಡಿಸಿ ಕಚೇರಿ ಸ್ಥಾನಿಕ ಅಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

Vijaya Karnataka 14 Jul 2018, 5:00 am
ರಾಯಚೂರು : ಅಮೆರಿಕನ್‌ ಟೆಲಿಕಾಂ ಟವರ್‌ ಕಾಪೋರ್‍ರೇಷನ್‌ ಕಂಪನಿಯ ಕಾರ್ಮಿಕರ ಮೇಲೆ ಹಾಕಿದ ಸುಳ್ಳು ಪ್ರಕರಣಗಳನ್ನು ಕೂಡಲೇ ವಾಪಸ್‌ ಪಡೆಯಬೇಕೆಂದು ಆಗ್ರಹಿಸಿ ಸೆಂಟರ್‌ ಆಫ್‌ ಇಂಡಿಯಾ ಟ್ರೇಡ್‌ ಯೂನಿಯನ್ಸ್‌ (ಸಿಐಟಿಯು) ಪದಾಧಿಕಾರಿಗಳು ಡಿಸಿ ಕಚೇರಿ ಸ್ಥಾನಿಕ ಅಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
Vijaya Karnataka Web RAC-RCH13HD03


ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟಿಸಿದ ಪದಾಧಿಕಾರಿಗಳು, ಅಮೇರಿಕನ್‌ ಟೆಲಿಕಾಂ ಟವರ್‌ ಕಾಪೋರ್‍ರೇಷನ್‌ ಕಂಪನಿಯಡಿ ರಾಜ್ಯಾದ್ಯಂತ ಮೊಬೈಲ್‌ ಟವರ್‌ಗಳ ಆಪರೇಟರ್‌ಗಳಾಗಿ ರಾಯಚೂರಿನ 15 ಕಾರ್ಮಿಕರು ಸೇರಿ ರಾಜ್ಯದಲ್ಲಿ ಒಟ್ಟು 500 ಜನ ಕಾರ್ಮಿಕರು ಆಪರೇಟರ್‌ಗಳಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಈ ಎಲ್ಲ ಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿಸಿಕೊಳ್ಳಲಾಗುತ್ತಿದ್ದು, ಗುತ್ತಿಗೆ ಕಾರ್ಮಿಕರಿಗೆ ಯಾವುದೇ ಕನಿಷ್ಠ ಸೌಲಭ್ಯ ನೀಡಿಲ್ಲ. ಕೇವಲ 5 ರಿಂದ 6 ಸಾವಿರ ಮಾತ್ರ ವೇತನ ನೀಡಲಾಗುತ್ತಿದೆ. ಕಂಪನಿಯ ಅಡಳಿತ ಮಂಡಳಿ ಕಾರ್ಮಿಕರ ಮೇಲೆ ಸುಳ್ಳು ಆರೋಪ ಮಾಡುತ್ತಾ ಮಾನಸಿಕ ಕಿರುಕುಳ ನೀಡುತ್ತಾ ಬಂದಿದೆ ಎಂದು ದೂರಿದರು.

ಸುಳ್ಳು ಪ್ರಕರಣ: ಈ ಕುರಿತು ಬೆಂಗಳೂರಿನ ಕಾರ್ಮಿಕ ಆಯುಕ್ತರಿಗೆ ದೂರು ಸಲ್ಲಿಸಿದ ಕಾರಣ ಪ್ರಮುಖ ಕಾರ್ಮಿಕರನ್ನು ಉದ್ದೇಶಪೂರ್ವಕವಾಗಿ ಕೆಲಸದಿಂದ ವಜಾ ಮಾಡಲಾಗಿದೆ. ಪ್ರಕರಣ ಆಯುಕ್ತರ ಕಚೇರಿಯಲ್ಲಿ ಇರುವಾಗಲೇ 2017ರ ಆಗಸ್ಟ್‌ 18ರಂದು ರಾಯಚೂರಿನ ವೆಸ್ಟ್‌ ಸರ್ಕಲ್‌ ಪೊಲೀಸ್‌ ಸ್ಟೇಷನ್‌ನಲ್ಲಿ 10 ಕಾರ್ಮಿಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ. 2017ರ ಆಗಸ್ಟ್‌ 28ರಂದು ಸಿಂಧನೂರು ತಾಲೂಕಿನ ಬಳಗಾನೂರು ಪೊಲೀಸ್‌ ಠಾಣೆಯಲ್ಲಿ ಒಂದು ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಿ ಕಾರ್ಮಿಕರ ಮೇಲೆ ದಾಖಲಿಸಿರುವ ಸುಳ್ಳು ಪ್ರಕರಣಗಳನ್ನು ಪರಿಶೀಲಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಿ ಕಾರ್ಮಿಕರಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಎಚ್‌.ಪದ್ಮಾ, ಕಾರ್ಯದರ್ಶಿ ಶೇಕ್ಷಾಖಾದ್ರಿ, ಡಿ.ಎಸ್‌. ಶರಣ ಬಸವ, ಪ್ರವೀಣರೆಡ್ಡಿ, ತಿಮ್ಮಾರೆಡ್ಡಿ, ಶರಣಗೌಡ, ಚಂದ್ರಶೇಖರ್‌ ರೆಡ್ಡಿ ಸೇರಿ ಇತರರು ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ