ಆ್ಯಪ್ನಗರ

ಮಹಿಳಾ ಅಭಿವೃದ್ಧಿ ನಿಗಮದ ಜಂಟಿ ನಿರ್ದೇಶಕಿ ಭೇಟಿ-ವೀಕ್ಷ ಣೆ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಂಟಿ ನಿರ್ದೇಶಕಿ ರೋಹಿಣಿ ಹಿರೇಮಠ ಅವರು ಪಟ್ಟಣದ ಚರ್ಚ್‌ನಲ್ಲಿರುವ ಸುಪಿರೀಯರ್‌ ಸೇವಾಶ್ರಮ ಕುಟೀರ, ಸಿಸ್ಟರ್ಸ್‌ ಆಫ್‌ ಚಾರಿಟಿ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿ ಮೂಲ ಸೌಲಭ್ಯಗಳನ್ನು ಪರಿಶೀಲಿಸಿದರು.

Vijaya Karnataka 18 Aug 2018, 5:00 am
ಕವಿತಾಳ : ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಂಟಿ ನಿರ್ದೇಶಕಿ ರೋಹಿಣಿ ಹಿರೇಮಠ ಅವರು ಪಟ್ಟಣದ ಚರ್ಚ್‌ನಲ್ಲಿರುವ ಸುಪಿರೀಯರ್‌ ಸೇವಾಶ್ರಮ ಕುಟೀರ, ಸಿಸ್ಟರ್ಸ್‌ ಆಫ್‌ ಚಾರಿಟಿ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿ ಮೂಲ ಸೌಲಭ್ಯಗಳನ್ನು ಪರಿಶೀಲಿಸಿದರು.
Vijaya Karnataka Web joint director of women development corporation visit view
ಮಹಿಳಾ ಅಭಿವೃದ್ಧಿ ನಿಗಮದ ಜಂಟಿ ನಿರ್ದೇಶಕಿ ಭೇಟಿ-ವೀಕ್ಷ ಣೆ


ಚರ್ಚ್‌ ಸೇವಾಶ್ರಮದಲ್ಲಿನ ಮೂಲ ಸೌಲಭ್ಯಗಳಾದ ಶೌಚಾಲಯ, ಕುಡಿಯುವ ನೀರು, ಆಹಾರ ಹಾಗೂ ವಾಸಿಸುವ ಕೋಣೆಗಳನ್ನು ವೀಕ್ಷಿಸಿದ ಅವರು, ಶಿಸ್ತು ಮತ್ತು ಸ್ವಚ್ಛತೆಗೆ ಹೆಚ್ಚು ಗಮನ ನೀಡಬೇಕು, ಆಶ್ರಮದಲ್ಲಿರುವ ಪ್ರತಿಯೊಬ್ಬರಿಗೂ ಸೌಲಭ್ಯವನ್ನು ಒದಗಿಸುವ ಪ್ರಯತ್ನವಾಗಬೇಕು. ಇನ್ನು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸೇವಾಶ್ರಮದ ಸಿಬ್ಬಂದಿಗೆ ಸೂಚಿಸಿದರು.

ಬಳಿಕ ಪಟ್ಟಣದ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಆಹಾರ ಸರಬರಾಜು, ಮಕ್ಕಳ ಕಲಿಕೆ, ಆರೋಗ್ಯ ರಕ್ಷಣೆ, ಗರ್ಭಿಣಿ ಮತ್ತು ಬಾಣಂತಿಯರಿಗೆ ಮಾತೃಪೂರ್ಣ ಯೋಜನೆಯ ಸೌಲಭ್ಯಗಳು ಸಮರ್ಪಕವಾಗಿ ಮುಟ್ಟಿಯೋ? ಇಲ್ಲವೋ? ಎಂಬುದರ ಬಗ್ಗೆ ವಿಚಾರಿಸಿದರು. ಕೇಂದ್ರಗಳಿಗೆ ಸರಬರಾಜಾಗುವ ಪೌಷ್ಟಿಕ ಆಹಾರದ ಉಪಯೋಗ ಕುರಿತು ಶಿಕ್ಷ ಕಿಯರಿಂದ ಮಾಹಿತಿ ಪಡೆದರು.

ಶಾಲೆಯಲ್ಲಿನ ಮಕ್ಕಳ ಹಾಜರಾತಿ, ಗ್ರೇಡ್‌ ಪುಸ್ತಕ, ಆಹಾರ ದಾಸ್ತಾನು ರಿಜಿಸ್ಟರ್‌ ಸೇರಿ ಇತರ ಕಡತಗಳನ್ನು ಪರಿಶೀಲಿಸಿದರು. ಕೇಂದ್ರಗಳಿಗೆ ಆಗಮಿಸುವ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕೇಂದ್ರಗಳಲ್ಲಿ ಆದಷ್ಟು ಸ್ವಚ್ಛತೆ ಕಾಪಾಡುವ ಮೂಲಕ ಅಂಗನವಾಡಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡುವ ಉದ್ದೇಶ ಹೊಂದಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸಿಡಿಪಿಒ ಗುರುಪ್ರಸಾದ, ವೀರನಗೌಡ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ