ಆ್ಯಪ್ನಗರ

ನ್ಯಾಯವಾದಿ ಹತ್ಯೆ: ಆರೋಪಿಗಳ ಪತ್ತೆಗೆ ಮನವಿ

ದಾಂಡೇಲಿ ವಕೀಲರ ಸಂಘದ ಹಿರಿಯ ವಕೀಲ ಅಜೀತ್‌ ನಾಯಕರನ್ನು ದುಷ್ಕರ್ಮಿಗಳು ಇತ್ತೀಚೆಗೆ ಹತ್ಯೆ ನಡೆಸಿರುವುದು ಖಂಡನೀಯ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಲಿಂಗಸುಗೂರು ವಕೀಲರ ಸಂಘದ ಪದಾಧಿಕಾರಿಗಳು ಸೋಮವಾರ ನ್ಯಾಯಾಲಯದ ಕಲಾಪದಿಂದ ದೂರ ಉಳಿದು ಪ್ರತಿಭಟನೆ ನಡೆಸಿದರು.

Vijaya Karnataka 31 Jul 2018, 5:00 am
ಲಿಂಗಸುಗೂರು : ದಾಂಡೇಲಿ ವಕೀಲರ ಸಂಘದ ಹಿರಿಯ ವಕೀಲ ಅಜೀತ್‌ ನಾಯಕರನ್ನು ದುಷ್ಕರ್ಮಿಗಳು ಇತ್ತೀಚೆಗೆ ಹತ್ಯೆ ನಡೆಸಿರುವುದು ಖಂಡನೀಯ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಲಿಂಗಸುಗೂರು ವಕೀಲರ ಸಂಘದ ಪದಾಧಿಕಾರಿಗಳು ಸೋಮವಾರ ನ್ಯಾಯಾಲಯದ ಕಲಾಪದಿಂದ ದೂರ ಉಳಿದು ಪ್ರತಿಭಟನೆ ನಡೆಸಿದರು.
Vijaya Karnataka Web RAC-RCH30LNG01


ಹಿರಿಯ ವಕೀಲ ಅಜೀತ್‌ ನಾಯಕರನ್ನು ಜು.27ರಂದು ವ್ಯಕ್ತಿಯೊಬ್ಬ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದಾನೆ. ಈ ಘಟನೆಯನ್ನು ವಕೀಲರ ಸಂಘ ತೀವ್ರವಾಗಿ ಖಂಡಿಸುತ್ತದೆ. ಕೂಡಲೇ ಹತ್ಯೆ ಮಾಡಿದವರನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ ರಾಜ್ಯದ ಪೊಲೀಸ್‌ ನಿರ್ದೇಶಕರಿಗೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿ ರಾಜ್ಯಪಾಲರಿಗೆ ಬರೆದ ಮನವಿಯಲ್ಲಿ ಪ್ರತಿಭಟನಾಕಾರರು ತಿಳಿಸಿದ್ದಾರೆ. ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ವಕೀಲರ ಸಂಘದ ಉಪಾಧ್ಯಕ್ಷ ವೀರಭದ್ರಪ್ಪ, ಅರುಣ್‌ಕುಮಾರ, ಮಹಾಂತೇಶ ಮರದ್‌,ಗಿರೀಶ್‌, ರಮೇಶ, ಅಮರೇಶ, ಸೋಮಶೇಖರ್‌, ಅಮರೇಶ ಗೌಡೂರು, ಬಾಷುಮಿಯಾ, ವೀರೇಶ, ಶಿವಶಂಕರಪ್ಪ ಸೇರಿದಂತೆ ಇತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ