ಆ್ಯಪ್ನಗರ

ರಾಜಕೀಯ ವಿದ್ಯಾಮಾನ ಕಲ್ಪನೆಯಷ್ಟೇ: ಡಿಕೆಶಿ

ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರ ಸುಭದ್ರವಾಗಿದ್ದು, ಐದು ವರ್ಷ ಪೂರೈಸಲಿದೆ. ಈ ಬಗ್ಗೆ ನಡೆಯುತ್ತಿರುವ ಎಲ್ಲ ರಾಜಕೀಯ ವಿದ್ಯಮಾನಗಳು ಕಲ್ಪನೆಯಷ್ಟೇ. ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

Vijaya Karnataka 17 Sep 2018, 7:51 pm
ರಾಯಚೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರ ಸುಭದ್ರವಾಗಿದ್ದು, ಐದು ವರ್ಷ ಪೂರೈಸಲಿದೆ. ಈ ಬಗ್ಗೆ ನಡೆಯುತ್ತಿರುವ ಎಲ್ಲ ರಾಜಕೀಯ ವಿದ್ಯಮಾನಗಳು ಕಲ್ಪನೆಯಷ್ಟೇ. ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
Vijaya Karnataka Web just like a political idea dkshi
ರಾಜಕೀಯ ವಿದ್ಯಾಮಾನ ಕಲ್ಪನೆಯಷ್ಟೇ: ಡಿಕೆಶಿ


ಅವರು ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯ ಸರಕಾರ ಪತನಗೊಳ್ಳಲಿದೆ ಎಂಬುದು ಊಹಾಪೋಹ. ಯಾವ ಶಾಸಕರೂ ಪಕ್ಷ ತೊರೆಯುವುದಿಲ್ಲ ಎಂದರು.

ಅಮಾನತು ಎಚ್ಚರಿಕೆ: ಖಾಲಿ ಇರುವ ಎಂಜಿನಿಯರ್‌ಗಳ ಹುದ್ದೆಗೆ ರಾಜ್ಯದ ಇರೆ ಭಾಗದಿಂದ ಎಂಜಿನಿಯರ್‌ಗಳನ್ನು ವರ್ಗಾಯಿಸಲಾಗಿದೆ. ಕೂಡಲೇ ಸೇವೆಗೆ ಹಾಜರಾಗಬೇಕು. ಸೇವೆಗೆ ಹಾಜರಾಗಲು ನಿರಾಕರಿಸಿದರೆ, ಅಮಾನತುಗೊಳಿಸಲಾಗುತ್ತದೆ ಎಂದು ಎಚ್ಚರಿಸಿದರು. ತುಂಗಭದ್ರಾ ನೀರಾವರಿ ವಲಯದಲ್ಲಿ ಹುದ್ದೆ ಖಾಲಿಯಿಲ್ಲದಂತೆ ನೋಡಿಕೊಳ್ಳಲು 42 ಜನರನ್ನು ವರ್ಗಾಯಿಸಲಾಗಿದೆ ಎಂದರು. ಸಂಸದ ಬಿ.ವಿ.ನಾಯಕ, ಶಾಸಕರಾದ ಎನ್.ಎಸ್.ಬೋಸರಾಜು, ಡಾ.ಶಿವರಾಜ್ ಪಾಟೀಲ್, ಶಿವನಗೌಡ ನಾಯಕ, ಬಸವರಾಜ ಪಾಟೀಲ್ ಇಟಗಿ, ದದ್ದಲ ಬಸನಗೌಡ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿ.ಪಂ ಸಿಇಒ ನಳಿನಿ ಅತುಲ್, ಎಸ್ಪಿ ಕಿಶೋರಬಾಬು, ನೀರಾವರಿ ನಿಗಮದ ಎಂಡಿ ಮಲ್ಲಿಕಾರ್ಜುನ ಗುಂಗೆ ಸೇರಿ ಅನೇಕರಿದ್ದರು.

....

ರಾಜಕೀಯ ಹಸ್ತಕ್ಷೇಪವಿಲ್ಲ

ನೀರಾವರಿ ಯೋಜನೆಗಳ ಕಾಲುವೆಗಳಿಂದ ಅಕ್ರಮ ನೀರು ಪಡೆದು ಕೃಷಿಯಲ್ಲಿ ತೊಡಗಿರುವವರ ವಿರುದ್ಧವೂ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರಕಾರ ಶೀಘ್ರ ನಿರ್ಧಾರ ಕೈಗೊಳ್ಳಲಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಅಕ್ರಮ ನೀರಾವರಿಗೆ ಸಂಬಂಧಿಸಿ ರಾಜಕೀಯ ಹಸ್ತಕ್ಷೇಪ ತಡೆಗೆ ಎಲ್ಲ ಶಾಸಕರಿಂದ ಸಹಿ ಮಾಡಿದ ಒಪ್ಪಿಗೆ ಪತ್ರ ಪಡೆದಿದ್ದು, ಮುಂದಿನ ದಿನಗಳಲ್ಲಿ ಸರಕಾರ ಕೈಗೊಳ್ಳುವ ಯಾವುದೇ ರೀತಿಯ ನಿರ್ಧಾರಕ್ಕೆ ಶಾಸಕರು ಬದ್ಧರಾಗಿರುತ್ತಾರೆ. ರಾಜಕೀಯ ಹಸ್ತಕ್ಷೇಪ ನಡೆಯದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ