ಆ್ಯಪ್ನಗರ

ಕೊಪ್ಪರ ಲಕ್ಷ್ಮಿ ನರಸಿಂಹ ದೇವಸ್ಥಾನ ಮುಳುಗಡೆ

ಬಸವಸಾಗರ ಜಲಾಶಯದಿಂದ 4 ಲಕ್ಷ 80 ಸಾವಿರ ಕ್ಯೂಸೆಕ್‌ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಹರಿಬಿಟ್ಟಿದ್ದು, ಕೊಪ್ಪರ ಗ್ರಾಮದ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನ ಮುಕ್ಕಾಲು ಭಾಗ ಮುಳುಗಿದೆ.

Vijaya Karnataka 10 Aug 2019, 5:00 am
ದೇವದುರ್ಗ (ರಾಯಚೂರು) : ಬಸವಸಾಗರ ಜಲಾಶಯದಿಂದ 4 ಲಕ್ಷ 80 ಸಾವಿರ ಕ್ಯೂಸೆಕ್‌ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಹರಿಬಿಟ್ಟಿದ್ದು, ಕೊಪ್ಪರ ಗ್ರಾಮದ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನ ಮುಕ್ಕಾಲು ಭಾಗ ಮುಳುಗಿದೆ. ದೇವಸ್ಥಾನ ಸುತ್ತಲಿನ ಮನೆಗಳಿಗೂ ನೀರು ನುಗ್ಗಿದೆ. ನೆರೆ ಹಾವಳಿ ಸಂತ್ರಸ್ತರಿಗೆ ಸಾರ್ವಜನಿಕರು ಸಹಾಯಹಸ್ತ ಚಾಚಿದ್ದಾರೆ. ಅಂಜಳ ಗ್ರಾಮದ ಕಾಳಜಿ ಕೇಂದ್ರದಿಂದ ಹೂವಿನಹೆಡಗಿ, ಗೂಗಲ್‌ ಬ್ರಿಡ್ಜ್‌ ಕಂ ಬ್ಯಾರೇಜ್‌ ಮೀನುಗಾರರಿಗೆ ಆಹಾರ ಸೇರಿ ದಿನ ಬಳಕೆ ವಸ್ತು ಹಾಗೂ ಹೊದಿಕೆಗಳನ್ನು ವಿತರಿಸಲಾಗಿದೆ.
Vijaya Karnataka Web RAC-RCH09DEO05


ನದಿ ತೀರದ ಶ್ರೀ ಗಡ್ಡೆಗೊಳ್ಳಿ ಬಸವೇಶ್ವರ, ಕೊಪ್ಪರ ಗ್ರಾಮದ ಶ್ರೀ ಲಕ್ಷ್ಮಿ ನರಸಿಂಹ, ಕೊಣಚಪ್ಪಳ್ಳಿ ಗ್ರಾಮ ಅಣೆಮಲ್ಲೇಶ್ವರ ದೇವಸ್ಥಾನದಲ್ಲಿ ಕಳೆದ ಹತ್ತಾರು ದಿನಗಳಿಂದ ಪೂಜೆ ಪುರಸ್ಕಾರಗಳು ಸಂಪೂರ್ಣ ಸ್ಥಗಿತಗೊಂಡಿವೆ. ನೆರ ಪ್ರದೇಶಗಳಲ್ಲಿ ವಿದ್ಯುತ್‌ ಸೇರಿ ಕುಡಿವ ನೀರಿನ ಸಮಸ್ಯೆ ಉಂಟಾಗಿದೆ. ಅಧಿಕಾರಿಗಳ ಸ್ಪಂದನೆ ಉತ್ತಮವಾಗಿದ್ದು, ಸಂತ್ರಸ್ತರ ಸಂಕಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ