ಆ್ಯಪ್ನಗರ

ಕುಮಾರಸ್ವಾಮಿಯವರದ್ದು ಹಿಟ್‌ ಅಂಡ್‌ ರನ್‌ ನಡೆ: ಪ್ರಹ್ಲಾದ್‌ ಜೋಶಿ

ಕುಮಾರಸ್ವಾಮಿ ಸಿಡಿ ಬಿಡುಗಡೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಹತಾಶರಾದ ಕುಮಾರಸ್ವಾಮಿ ಹೀಗೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಅಲ್ಲದೆ, ಗಡಿ ವಿವಾದಕ್ಕಿಂತ ಅಭಿವೃದ್ಧಿ ಕಡೆಗೆ ಗಮನ ಕೊಡೋಣ ಎಂದೂ ಹೇಳಿದರು.

Vijaya Karnataka Web 12 Jan 2020, 12:12 pm
ರಾಯಚೂರು: ಮಾಜಿ ಸಿಎಂ ಕುಮಾರಸ್ವಾಮಿ ಸಿಡಿ ಬಿಡುಗಡೆ ಬಗ್ಗೆ ಪೊಲೀಸ್‌ ಅಧಿಕಾರಿಗಳಿಂದ ಈಗಾಗಲೇ ಸ್ಪಷ್ಟನೆ ದೊರೆತಿದೆ. ಕುಮಾರಸ್ವಾಮಿಯವರದ್ದು ಹಿಟ್ ಅಂಡ್ ರನ್ ನಡೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಜಿ ಸಿಎಂ ವಿರುದ್ಧ ವ್ಯಂಗ್ಯವಾಡಿದ್ದಾರೆ.
Vijaya Karnataka Web pralhad joshi toi


ಕುಮಾರಸ್ವಾಮಿಯವರದ್ದು ಹಿಟ್ ಅಂಡ್ ರನ್ ನಡೆ. ಪಕ್ಷದ ಹೀನಾಯ ಸ್ಥಿತಿಯಿಂದ ಹತಾಶರಾದ ಕುಮಾರಸ್ವಾಮಿ ಹೀಗೆ ಮಾಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಸಿಡಿ ಬಿಡುಗಡೆ ಬಗ್ಗೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ ಮಾಡಿದ್ದಾರೆ.

ಯಾರ ಮೇಲೆ ದಾಳಿ ಮಾಡಲು ಯಾರಿಗೂ ಹಕ್ಕಿಲ್ಲ. ಮಂಗಳೂರು ಪೊಲೀಸರು ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಂಡಿದ್ದಾರೆ. ಪೊಲೀಸರು ಕ್ರಮ ಕೈಗೊಂಡರೆ ಅವರ ವಿರುದ್ದ ಆರೋಪ ಹೊರಿಸುವುದು ಸರಿಯಾದ ನಡೆಯಲ್ಲ ಎಂದು ರಾಯಚೂರು ನಗರದಲ್ಲಿ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಮಂಗಳೂರು ಗಲಭೆ ಸಿಡಿ ಬಿಡುಗಡೆ: ಸಮಗ್ರ ತನಿಖೆ ಬಳಿಕ ಸತ್ಯಾಂಶ ಬಯಲು - ಕಮಿಷನರ್‌

ಆಂಧ್ರದ ಕರ್ನೂಲ್ ಜಿಲ್ಲೆಯನ್ನು ರಾಜ್ಯಕ್ಕೆ ಸೇರಿಸುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಹ್ಲಾದ ಜೋಶಿ, ಗಡಿ ವಿವಾದಗಳು ಬಹಳ ಇವೆ, ಇದರ ಬದಲು ಅಭಿವೃದ್ಧಿ ಕಡೆ ಗಮನ ಕೊಡುವುದು ಒಳಿತು. ಜಿಡಿಪಿ ಹೆಚ್ಚಳಕ್ಕೆ ಕ್ರಮ ಕೈಗೊಂಡಿದ್ದೇವೆ. ಬಜೆಟ್ ಮೂಲಕ ದೇಶದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ಜಾರಿಗೆ ತರಲಾಗುವುದು ಎಂದು ರಾಯಚೂರು ನಗರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಮಂಗಳೂರಲ್ಲಿ ಪೊಲೀಸರು ಫೈರಿಂಗ್‌ ಮಾಡೋ ಅವಶ್ಯಕತೆಯಿರಲಿಲ್ಲ: ಎಸ್‌ಆರ್‌ ಪಾಟೀಲ್‌

ಎಚ್‌ಡಿಕೆ ಅಲ್ಲ ಸಿಡಿಕೆ, ಮಂಗಳೂರು ಗಲಭೆ ವಿಡಿಯೋ ನಕಲಿ ಎಂದ ಈಶ್ವರಪ್ಪ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ