ಆ್ಯಪ್ನಗರ

ಸೇತುವೆ ನಿರ್ಮಾಣಕ್ಕಾಗಿ ಸಿಎಂಗೆ ಪತ್ರ

ಕಡದರಗಡ್ಡಿ-ಗೋನವಾಟ್ಲ ನಡುವೆ ಸೇತುವೆ ನಿರ್ಮಾಣಕ್ಕಾಗಿ ಈಗಾಗಲೇ 18 ಕೋಟಿ ರೂ. ಅಂದಾಜು ವೆಚ್ಚ ಸಿದ್ಧಡಿಸಲಾಗಿದ್ದು, ತೀವ್ರಗತಿಯಲ್ಲಿ ಕಾರ್ಯಗತಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.

Vijaya Karnataka 9 Aug 2019, 5:00 am
ಲಿಂಗಸುಗೂರು : ಕಡದರಗಡ್ಡಿ-ಗೋನವಾಟ್ಲ ನಡುವೆ ಸೇತುವೆ ನಿರ್ಮಾಣಕ್ಕಾಗಿ ಈಗಾಗಲೇ 18 ಕೋಟಿ ರೂ. ಅಂದಾಜು ವೆಚ್ಚ ಸಿದ್ಧಡಿಸಲಾಗಿದ್ದು, ತೀವ್ರಗತಿಯಲ್ಲಿ ಕಾರ್ಯಗತಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.
Vijaya Karnataka Web letter to cm for bridge construction
ಸೇತುವೆ ನಿರ್ಮಾಣಕ್ಕಾಗಿ ಸಿಎಂಗೆ ಪತ್ರ


ತಾಲೂಕಿನ ಪ್ರವಾಹಪೀಡಿತ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಡದರಗಡ್ಡಿ ಗೋನವಾಟ್ಲ್‌ ಗ್ರಾಮಗಳ ನಡುವೆ ಸೇತುವೆ ನಿರ್ಮಾಣ ಮಾಡುವುದರಿಂದ ಇಲ್ಲಿನ ಜನತೆ ಪ್ರವಾಹ ಸಂದರ್ಭ ಉಂಟಾಗುವ ಸಂಪರ್ಕ ಕಡಿತದ ಸಮಸ್ಯೆಯಿಂದ ಮುಕ್ತಿಹೊಂದುತ್ತಾರೆ. 18 ಕೋಟಿ ರೂ.ಗಳ ಅಂದಾಜು ವೆಚ್ಚ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದ್ದು, ಇದಕ್ಕೆ ಸ್ಪಂದಿಸಿ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಕೆಲಸವನ್ನು ತ್ವರಿಗತಿಯಲ್ಲಿ ಕೈಗೆತ್ತಿಕೊಳ್ಳುವಂತೆ ಸಿಎಂ ಸೂಚಿಸಿದ್ದಾರೆಂದರು.

ಬದ್ಧ: ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸದ್ಯಕ್ಕೆ ಬೇಕಾಗುವ ಅಗತ್ಯ ಪರಿಹಾರ ಕಾರ್ಯಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸರಕಾರ ಪ್ರವಾಹ ನಿರ್ವಹಣೆಗಾಗಿ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನಡುಗಡ್ಡೆ ಗ್ರಾಮಗಳಿಗೆ ಶಾಶ್ವತ ಪರಿಹಾರಕ್ಕಾಗಿ ಸರಕಾರಗಳು ಬದ್ಧವಾಗಿದೆ. ಈಗಾಗಲೇ ಪ್ರವಾಹ ಸಂತ್ರಸ್ತರ ನೆರವಿಗೆ ಕೇಂದ್ರ ಸರಕಾರ ಮುಂದಾಗಿದೆ. ಸಂತ್ರಸ್ತರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಇವೆ. ಸಂತ್ರಸ್ತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

ಮುಖಂಡರಾದ ರಾಜಾ ಶ್ರೀನಿವಾಸ ನಾಯಕ, ರಾಜಾ ಸೋಮನಾಥ ನಾಯಕ, ನಾಗಪ್ಪ ವಜ್ಜಲ್‌, ಡಾ.ಶಿವಬಸಪ್ಪ, ಹನುಮಂತಪ್ಪ ತೊಗರಿ, ಖಾದರಪಾಶಾ, ಬಿಜೆಪಿ ಮಂಡಲ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಗೋವಿಂದ ನಾಯಕ, ನಂದೇಶ ನಾಯಕ, ಹುಲ್ಲೇಶ ಸಾಹುಕಾರ, ವೀರಣ್ಣ ಹುರಕಡ್ಲಿ, ನವಾಬ್‌, ಅಲ್ಲಾವುದ್ದೀನ್‌, ಶಶಿಕಾಂತ ಗಸ್ತಿ, ಜಗನ್ನಾಥ ಕುಲಕರ್ಣಿ, ಅಯ್ಯಪ್ಪ ವಕೀಲ, ಚೆನ್ನಬಸವ ಹಿರೇಮಠ, ಸಹಾಯಕ ಆಯುಕ್ತ ರಾಜಶೇಖರ್‌ ಡಂಬಳ್‌, ಡಿವೈಎಸ್‌ಪಿ ಜಿ.ಹರೀಶ್‌, ತಹಸೀಲ್ದಾರ ಚಾಮರಾಜ್‌ ಪಾಟೀಲ್‌, ತಾ.ಪಂ ಇಒ ಪ್ರಕಾಶ, ಸಿಪಿಐ ಯಶವಂತ ಬಿಸನಳ್ಳಿ ಹಾಗೂ ಇನ್ನಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ