ಆ್ಯಪ್ನಗರ

ಲೋಕಸಭೆ ಚುನಾವಣೆಯಲ್ಲಿ ವೀರಶೈವರು ಕಾಂಗ್ರೆಸ್‌ಗೆ ಬುದ್ಧಿ ಕಲಿಸಬೇಕು: ಬಿಎಸ್‌ವೈ

''ವೀರಶೈವ ಲಿಂಗಾಯತ ಪ್ರತ್ಯೇಕಿಸುವ ಮೂಲಕ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗದಂತೆ ಮಾಡಿದ ಕಾಂಗ್ರೆಸಿಗರದ್ದು ಷಡ್ಯಂತ್ರ. ಅದರಿಂದ ಅವರು ಈಗಾಗಲೇ ಪಾಠ ಕಲಿತಿದ್ದಾರೆ. ಸಮಾಜವನ್ನು ಒಡೆಯುವ ಕೆಲಸ ಕಾಂಗ್ರೆಸ್ ಮಾಡಿದ್ದು, ಈ ಹಿನ್ನೆಲೆ ಲೋಕಸಭೆ ಚುನಾವಣೆಯಲ್ಲಿ ವೀರಶೈವರು ಕಾಂಗ್ರೆಸ್‌ಗೆ ಬುದ್ಧಿ ಕಲಿಸಬೇಕಿದೆ'' ಎಂದು ಯಡಿಯೂರಪ್ಪ ಹೇಳಿದ್ದಾರೆ.

Vijaya Karnataka Web 16 Apr 2019, 3:31 pm
ರಾಯಚೂರು: ''ವೀರಶೈವ ಲಿಂಗಾಯತ ಪ್ರತ್ಯೇಕಿಸುವ ಮೂಲಕ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗದಂತೆ ಮಾಡಿದ ಕಾಂಗ್ರೆಸಿಗರದ್ದು ಷಡ್ಯಂತ್ರ'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆರೋಪಿಸಿದ್ದಾರೆ. ಅಲ್ಲದೆ, ''ಸಮಾಜವನ್ನು ಒಡೆಯುವ ಕೆಲಸ ಕಾಂಗ್ರೆಸ್ ಮಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ವೀರಶೈವರು ಕಾಂಗ್ರೆಸ್‌ಗೆ ಬುದ್ಧಿ ಕಲಿಸಬೇಕಿದೆ'' ಎಂದು ಜಿಲ್ಲೆಯ ಸಿರವಾರದ ಹೆಲಿಪ್ಯಾಡ್‌ನಲ್ಲಿ ಯಡಿಯೂರಪ್ಪ ಹೇಳಿದ್ದಾರೆ.
Vijaya Karnataka Web yeddyurappa 1


''ವೀರಶೈವ ಲಿಂಗಾಯತ ಪ್ರತ್ಯೇಕಿಸುವ ಮೂಲಕ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗದಂತೆ ಮಾಡಿದ ಕಾಂಗ್ರೆಸಿಗರದ್ದು ಷಡ್ಯಂತ್ರ. ಅದರಿಂದ ಅವರು ಈಗಾಗಲೇ ಪಾಠ ಕಲಿತಿದ್ದಾರೆ. ಸಮಾಜವನ್ನು ಒಡೆಯುವ ಕೆಲಸ ಕಾಂಗ್ರೆಸ್ ಮಾಡಿದ್ದು, ಈ ಹಿನ್ನೆಲೆ ಲೋಕಸಭೆ ಚುನಾವಣೆಯಲ್ಲಿ ವೀರಶೈವರು ಕಾಂಗ್ರೆಸ್‌ಗೆ ಬುದ್ಧಿ ಕಲಿಸಬೇಕಿದೆ'' ಎಂದು ರಾಯಚೂರಿನ ಸಿರವಾರದ ಹೆಲಿಪ್ಯಾಡ್‌ನಲ್ಲಿ ಮಾಜಿ ಸಿಎಂ ಮತದಾರರಲ್ಲಿ ಮನವಿ ಮಾಡಿದರು.

ಇನ್ನು, ''ಸಚಿವ ಎಂ. ಬಿ. ಪಾಟೀಲ್ ಪ್ರತ್ಯೇಕ ಧರ್ಮ ಸ್ಥಾಪನೆಗೆ ಕಾಂಗ್ರೆಸ್‌ ನಾಯಕಿ ಸೋನಿಯಾಗಾಂಧಿ ಅವರಿಗೆ ಪತ್ರ ಬರೆದಿರುವುದು ಬಯಲಾದರೆ, ಮತ್ತೊಂದೆಡೆ ಸಚಿವ ಡಿ.ಕೆ.ಶಿವಕುಮಾರ್ ಅವರು ಧರ್ಮ ಪ್ರತ್ಯೇಕಿಸಲು ಮುಂದಾಗಿದ್ದು ಅಪರಾಧ ಎಂದು ಹೇಳುತ್ತಿರುವುದು ಕಾಂಗ್ರೆಸ್ ಪಕ್ಷದ ಕುತಂತ್ರವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕುತಂತ್ರ ನಡೆಯದು'' ಎಂದೂ ಯಡಿಯೂರಪ್ಪ ಹೇಳಿದ್ದಾರೆ.

ಇನ್ನೊಂದೆಡೆ, ''ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಗನನ್ನು ಗೆಲ್ಲಿಸಲು ಮಂಡ್ಯದಲ್ಲಿ 150 ಕೋಟಿ ರೂ. ವೆಚ್ಚ ಮಾಡುತ್ತಿದ್ದಾರೆಂಬ ಮಾಹಿತಿ ಇದೆ. ರಾಜ್ಯದ ಜನರ ಸಮಸ್ಯೆ ಮರೆತು ಅವರು ಮಂಡ್ಯದಲ್ಲಿದ್ದಾರೆ. ಆದರೆ, ಸುಮಲತಾ ಗೆಲವು ಯಾರಿಂದಲೂ ತಡೆಯಲು ಸಾಧ್ಯವಿಲ್ಲ'' ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ''ರಾಜ್ಯದಲ್ಲಿ ಬಿಜೆಪಿ 22ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ. ಪ್ರಸ್ತುತ ಸರಕಾರದವರು ಎಲ್ಲೆಲ್ಲಿ ಅಕ್ರಮವಾಗಿ ಹಣ ಸಂಗ್ರಹವಾಗಿ ಇರಿಸಿದ್ದಾರೋ ಅಲ್ಲಿ ಐಟಿ ದಾಳಿಯಾಗುತ್ತಿದೆ. ಕೇವಲ ಮೈತ್ರಿ ಪಕ್ಷಗಳ ಮುಖಂಡರ ಮೇಲೆ ದಾಳಿ ನಡೆಯುತ್ತದೆ ಎಂದು ಹೇಳುವುದು ಸರಿ ಅಲ್ಲ'' ಎಂದೂ ಬಿ.ಎಸ್.ಯಡಿಯೂರಪ್ಪ ಹೇಳಿಕೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ: ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ; ವೈರಲ್‌ ಆಗುತ್ತಿರುವ ಪತ್ರ ನಕಲಿ: ಎಂ.ಬಿ.ಪಾಟೀಲ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ