ಆ್ಯಪ್ನಗರ

ಅಭಿಮಾನಿಗಳ ಚದುರಿಸಲು ಲಾಠಿ

ಚಿತ್ರ ನಟ ಯಶ್ ಅವರನ್ನು ನೋಡಲು ಭಾನುವಾರ ಹೆಲಿಪ್ಯಾಡ್ ಬಳಿ ಅಪಾರ ಸಂಖ್ಯೆಯ ಅಭಿಮಾನಿಗಳು ನೂಕುನುಗ್ಗಲು ನಡೆಸಿದ್ದರಿಂದ ಗುಂಪು ಚದುರಿಸಲು ಪೊಲೀಸರು ಲಾಠಿ ಬೀಸಿದರು.

Vijaya Karnataka 27 Nov 2017, 7:22 am
ರಾಯಚೂರು; ಚಿತ್ರ ನಟ ಯಶ್ ಅವರನ್ನು ನೋಡಲು ಭಾನುವಾರ ಹೆಲಿಪ್ಯಾಡ್ ಬಳಿ ಅಪಾರ ಸಂಖ್ಯೆಯ ಅಭಿಮಾನಿಗಳು ನೂಕುನುಗ್ಗಲು ನಡೆಸಿದ್ದರಿಂದ ಗುಂಪು ಚದುರಿಸಲು ಪೊಲೀಸರು ಲಾಠಿ ಬೀಸಿದರು.
Vijaya Karnataka Web lotty to disperse fans
ಅಭಿಮಾನಿಗಳ ಚದುರಿಸಲು ಲಾಠಿ


ಶಾಸಕ ಮಾನಪ್ಪ ವಜ್ಜಲ್ ಅವರ ಪುತ್ರನ ಮದುವೆ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಟ ಯಶ್ ಮತ್ತು ರಾಧಿಕಾ ದಂಪತಿ ಆಗಮಿಸಿದ್ದರು. ಲಿಂಗಸುಗೂರು ಪಟ್ಟಣ ಹೊರವಲಯದಲ್ಲಿ ನಿರ್ಮಿಸಿದ ಹೆಲಿಪ್ಯಾಡ್‌ಗೆ ಮಧ್ಯಾಹ್ನ 1ರ ಸುಮಾರಿಗೆ ನಟ ಯಶ್ ಆಗಮಿಸಿದರು. ಅವರ ಆಗಮನಕ್ಕೂ ಮುನ್ನವೇ ಅಲ್ಲಿ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ಯಶ್ ಅವರಿದ್ದ ಹೆಲಿಕಾಪ್ಟರ್ ಇಳಿಯುತ್ತಿದ್ದಂತೆಯೇ ಜನರು ಹೆಲಿಕಾಪ್ಟರ್‌ನತ್ತ ಧಾವಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು.

ನಂತರ ಹೆಲಿಪ್ಯಾಡ್‌ನಿಂದ ಯಶ್ ಅವರು ಸಾಗಿದ ಮಾರ್ಗದುದ್ದಕ್ಕೂ ಅಭಿಮಾನಿಗಳು ಬೈಕ್‌ನಲ್ಲಿ ಸಾಗಿದ್ದರಿಂದ ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ