ಆ್ಯಪ್ನಗರ

ರಾಯರ ಮಠದಲ್ಲಿ ಮಹಾರಥೋತ್ಸವ

ರಾಯಚೂರು: ಗುರು ಸಾರ್ವಭೌಮ ಶ್ರೀರಾಘವೇಂದ್ರ ಸ್ವಾಮಿಗಳ 348ನೇ ಆರಾಧನಾ ಮಹೋತ್ಸವದ ನಿಮಿತ್ತ ಜವಾಹರ ನಗರದ ನಂಜನಗೂಡು ರಾಯರ ಮಠದಲ್ಲಿ ಉತ್ತರಾರಾಧನೆ ದಿನವಾದ ಭಾನುವಾರ ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ಜರುಗಿತು.

Vijaya Karnataka 27 Aug 2019, 3:19 pm
ರಾಯಚೂರು: ಗುರು ಸಾರ್ವಭೌಮ ಶ್ರೀರಾಘವೇಂದ್ರ ಸ್ವಾಮಿಗಳ 348ನೇ ಆರಾಧನಾ ಮಹೋತ್ಸವದ ನಿಮಿತ್ತ ಜವಾಹರ ನಗರದ ನಂಜನಗೂಡು ರಾಯರ ಮಠದಲ್ಲಿ ಉತ್ತರಾರಾಧನೆ ದಿನವಾದ ಭಾನುವಾರ ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ಜರುಗಿತು.
Vijaya Karnataka Web maharathotsava at rayara mata
ರಾಯರ ಮಠದಲ್ಲಿ ಮಹಾರಥೋತ್ಸವ


ಬೆಳಗಿನ ಜಾವ ನಿರ್ಮಾಲ್ಯ ವಿಸರ್ಜನೆ, ಸುಪ್ರಭಾತ, ಸಂಕೀರ್ತನೆ, ಉತ್ಸವರಾಯರ ಪಾದಪೂಜೆ, ಬೃಂದಾವನಕ್ಕೆ ಮಹಾ ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು. ಮಠದ ಪ್ರಾಕಾರದಲ್ಲಿ ನೂರಾರು ಭಕ್ತಾದಿಗಳ ಮಧ್ಯೆ ಮಹಾ ರಥೋತ್ಸವ ಸಂಭ್ರಮ ಸಡಗರದೊಂದಿಗೆ ನಡೆಯಿತು.

ವರ್ಣವೈವಿಧ್ಯದ ಬಗೆಬಗೆಯ ಹೂವುಗಳನ್ನು ರಾಯರ ಬೃಂದಾವನವನ್ನು ಅಲಂಕಾರ ಮಾಡುವ ಮೂಲಕ ರಾಯರ ಉತ್ಸವಕ್ಕೆ ವಿಶೇಷ ಮೆರುಗು ತಂದಿದ್ದು, ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಮೂಲಕ ಮೂರು ದಿನದ ರಾಯರ ಆರಾಧನಾ ಮಹೋತ್ಸವಕ್ಕೆ ತೆರೆ ಬಿದ್ದಿದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ