ಆ್ಯಪ್ನಗರ

ಮಹಾಶಿವರಾತ್ರಿ,ವಿಶೇಷ ಪೂಜೆ

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಗರದ ಚಂದ್ರಮೌಳೇಶ್ವರ ವೃತ್ತದಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿಉದ್ಭವಲಿಂಗಕ್ಕೆ ಶುಕ್ರವಾರ ಬೆಳಗ್ಗೆ ವಿಶೇಷ ಪೂಜೆ ನೆರವೇರಿಸಲಾಯಿತು.

Vijaya Karnataka Web 22 Feb 2020, 5:00 am
ರಾಯಚೂರು; ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಗರದ ಚಂದ್ರಮೌಳೇಶ್ವರ ವೃತ್ತದಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿಉದ್ಭವಲಿಂಗಕ್ಕೆ ಶುಕ್ರವಾರ ಬೆಳಗ್ಗೆ ವಿಶೇಷ ಪೂಜೆ ನೆರವೇರಿಸಲಾಯಿತು.
Vijaya Karnataka Web mahashivaratri special worship
ಮಹಾಶಿವರಾತ್ರಿ,ವಿಶೇಷ ಪೂಜೆ


ಬೆಳಗ್ಗೆ ಉದ್ಭವಲಿಂಗಕ್ಕೆ ಹೂವಿನ ಅಲಂಕಾರ ಮಾಡಲಾಗಿತ್ತು. ನಂತರ ಮಹಾಶಿವರಾತ್ರಿ ಅಂಗವಾಗಿ ಹೋಮ, ಹವನ, ಕ್ಷೀರಾಭಿಷೇಕ, ಮಹಾರುದ್ರಾಭಿಷೇಕ, ಪಂಚಾಮೃತಾಭಿಷೇಕವನ್ನು ಪ್ರಧಾನ ಅರ್ಚಕ ಶಿವಪುತ್ರಯ್ಯಸ್ವಾಮಿ ಜರುಗಿಸಿದರು. ದೇವಸ್ಥಾನಕ್ಕೆ ಬೆಳಗಿನ ಜಾವ ನಗರ ಸೇರಿ ಸುತ್ತಮುತ್ತಲ ಪ್ರದೇಶದಿಂದ ಭಕ್ತರು ಆಗಮಿಸಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ಭಕ್ತಿ ಸಮರ್ಪಿಸಿದರು. ಶಿವರಾತ್ರಿ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿಭಕ್ತರು ದೇವಸ್ಥಾನಕ್ಕೆ ಆಗಮಿಸುವ ಕಾರಣ ಅವರ ಅನುಕೂಲಕ್ಕಾಗಿ ಭಕ್ತರು ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಲು ಪ್ರತ್ಯೇಕ ಕೌಂಟರ್‌ ತೆಗೆಯಲಾಗಿತ್ತು. ಸರತಿ ಸಾಲಿನಲ್ಲಿನಿಂತು ಭಕ್ತರು ದರ್ಶನ ಪಡೆದು ಪುನೀತರಾದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ