ರಾಯಚೂರು: ಶಬರಿಮಲೆ ದೇವಸ್ಥಾನ ಪ್ರವೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನ ಆದೇಶ ಗೌರವಿಸುವ ಜತೆಗೆ ಸಂಪ್ರದಾಯಕ್ಕೂ ಬೆಲೆ ಕೊಡಬೇಕಿದೆ ಎಂದು ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರ ತೀರ್ಥರು ಹೇಳಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಶೀಘ್ರ ನಿರ್ಧಾರ ಕೈಗೊಂಡು ಶಾಂತಿಯುತ ಪರಿಹಾರ ಕಂಡುಕೊಳ್ಳುವ ಅವಶ್ಯಕತೆಯಿದೆ ಎಂದೂ ಅವರು ಹೇಳಿದರು.
ಇನ್ನು, ತುಂಗಭದ್ರಾ ನದಿಗೆ ಮಂತ್ರಾಲಯದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಆಂಧ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಬ್ಯಾರೇಜ್ ನಿರ್ಮಾಣದಿಂದ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಮತ್ತು ನದಿಯ ಎರಡೂ ಕಡೆಯ ಗ್ರಾಮಸ್ಥರ ಸಂಚಾರಕ್ಕೆ ಅನುಕೂಲವಾಗಲಿದೆ.
ಅಲ್ಲದೆ, ಕರ್ನಾಟಕದಲ್ಲಿ ಬರ ಹಿನ್ನೆಲೆ ರೈತರ ಸಂಕಷ್ಟಗಳಿಗೆ ಸರಕಾರ ತುರ್ತು ಸ್ಪಂದಿಸಬೇಕು. ರೈತರ ಸಾಲ ಮನ್ನಾಕ್ಕೆ ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಶೀಘ್ರ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರೈತರ ಸಮಸ್ಯೆಗಳಿಗೆ ಸಂಬಂಧಿಸಿ ಚರ್ಚಿಸಲು ನಿರ್ಧಾರ ಮಾಡಿದ್ದೇನೆ ಎಂದು ಸಹ ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರ ತೀರ್ಥರು ಹೇಳಿದ್ದಾರೆ.
ಇನ್ನು, ತುಂಗಭದ್ರಾ ನದಿಗೆ ಮಂತ್ರಾಲಯದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಆಂಧ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಬ್ಯಾರೇಜ್ ನಿರ್ಮಾಣದಿಂದ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಮತ್ತು ನದಿಯ ಎರಡೂ ಕಡೆಯ ಗ್ರಾಮಸ್ಥರ ಸಂಚಾರಕ್ಕೆ ಅನುಕೂಲವಾಗಲಿದೆ.
ಅಲ್ಲದೆ, ಕರ್ನಾಟಕದಲ್ಲಿ ಬರ ಹಿನ್ನೆಲೆ ರೈತರ ಸಂಕಷ್ಟಗಳಿಗೆ ಸರಕಾರ ತುರ್ತು ಸ್ಪಂದಿಸಬೇಕು. ರೈತರ ಸಾಲ ಮನ್ನಾಕ್ಕೆ ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಶೀಘ್ರ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರೈತರ ಸಮಸ್ಯೆಗಳಿಗೆ ಸಂಬಂಧಿಸಿ ಚರ್ಚಿಸಲು ನಿರ್ಧಾರ ಮಾಡಿದ್ದೇನೆ ಎಂದು ಸಹ ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರ ತೀರ್ಥರು ಹೇಳಿದ್ದಾರೆ.