ಆ್ಯಪ್ನಗರ

ಡ್ರಗ್ ಮಾಫಿಯಾದಲ್ಲಿ ಎಷ್ಟೇ ಜನ ಪ್ರಭಾವಿಗಳಿದ್ದರೂ ಕಠಿಣ ಕಾನೂನು ಕ್ರಮ ನಿಶ್ಚಿತ: ಶೆಟ್ಟರ್

ಎಂ ಯಡಿಯೂರಪ್ಪ ಅವರ ಸರಕಾರ ಅಧಿಕಾರಕ್ಕೆ ಬಂದ ನಂತರ ಕೈಗಾರಿಕಾ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗಿದೆ. ಮೊದಲು ಕೈಗಾರಿಕೆಗಳು ಬೆಂಗಳೂರಿಗೆ ಕೇಂದ್ರೀಕೃತ ವಾಗಿತ್ತು. ಈಗ ಉತ್ತರ ಕರ್ನಾಟಕದ ಜನಪ್ರತಿನಿಧಿಯಾಗಿ ಈ ಭಾಗದಲ್ಲಿ ಅನೇಕ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ನೀಡಿರುವೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರು.

Vijaya Karnataka Web 1 Sep 2020, 3:11 pm
ರಾಯಚೂರು: ಡ್ರಗ್ ಮಾಫಿಯಾದಲ್ಲಿ ಎಷ್ಟೇ ಜನ ಪ್ರಭಾವಿಗಳಿದ್ದರೂ ಕಠಿಣ ಕಾನೂನು ಕ್ರಮ ನಿಶ್ಚಿತ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ. ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಸಚಿವರು, ಸ್ಯಾಂಡಲ್‌ವುಡ್‌ನ ಡ್ರಗ್‌ ಮಾಫಿಯಾ ಸಂಬಂಧ ಪ್ರತಿಕ್ರಿಯಿಸಿದರು.
Vijaya Karnataka Web 5 SANTOSH 4_21


ಇನ್ನು ಮಾತು ಮುಂದುವರಿಸಿದ ಸಚಿವರು, ಸಿಎಂ ಯಡಿಯೂರಪ್ಪ ಅವರ ಸರಕಾರ ಅಧಿಕಾರಕ್ಕೆ ಬಂದ ನಂತರ ಕೈಗಾರಿಕಾ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗಿದೆ. ಮೊದಲು ಕೈಗಾರಿಕೆಗಳು ಬೆಂಗಳೂರಿಗೆ ಕೇಂದ್ರೀಕೃತ ವಾಗಿತ್ತು. ಈಗ ಉತ್ತರ ಕರ್ನಾಟಕದ ಜನಪ್ರತಿನಿಧಿಯಾಗಿ ಈ ಭಾಗದಲ್ಲಿ ಅನೇಕ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ನೀಡಿರುವೆ. ಕಲ್ಯಾಣ ಕರ್ನಾಟಕದ ಯಾದಗಿರಿ ಜಿಲ್ಲೆಯ ಕಡೇಚೂರಿನಲ್ಲಿ 3000 ಎಕರೆ ಭೂಮಿಯನ್ನು ಕೆಐಡಿಬಿ ಖರೀದಿಸಿದೆ. 15 ಫಾರ್ಮಾಸ್ಯುಟಿಕಲ್ ಕಂಪನಿಗಳು ಕಡೇಚೂರಿನಲ್ಲಿ ಆರಂಭವಾಗಲಿವೆ ಎಂದು ತಿಳಿಸಿದರು.

ಅಲ್ಲದೆ ಬಲ್ಕ್‌ ಡ್ರಗ್ ಫಾರ್ಮಾ ಪಾರ್ಕ್ ರಾಯಚೂರಿನಲ್ಲಿ ಆರಂಭಿಸಲು ಕೇಂದ್ರ ಸಚಿವ ಸದಾನಂದಗೌಡರಿಗೆ ಬೇಡಿಕೆ ಸಲ್ಲಿಸಲಾಗಿದೆ. ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ನಿಂದ ಆಟಿಕೆ ಸಾಮಾನುಗಳ ತಯಾರಿಕೆಗೆ ಸಿದ್ದತೆ ನಡೆದಿದೆ ಎಂದು ಅವರು ತಿಳಿಸಿದರು.

ಕೊರೊನಾ ಅನ್‌ಲಾಕ್: ಸೆಪ್ಟೆಂಬರ್‌ನಲ್ಲಿ ಮಂತ್ರಾಲಯ ರಾಯರ ದರ್ಶನ ನಿಶ್ಚಿತ
ಲಾಕ್ ಡೌನ್ ನಿಂದ ಶಾಶ್ವತವಾಗಿ ಯಾವುದೇ ಕೈಗಾರಿಕೆಗಳು ಬಂದ್ ಆಗಿಲ್ಲ ತೊಂದರೆಯಾಗಿದೆ ಎಂದು ಓಪ್ಪಿಕೊಂಡ ಸಚಿವರು, ಆತ್ಮನಿರ್ಭರ ಯೋಜನೆಯಿಂದ ಈಗ ಪುನಶ್ಚೇತನವಾಗುತ್ತಿದೆ. ರಾಯಚೂರಿನಲ್ಲಿ ವಿಮಾನ ನಿಲ್ದಾಣದ ಆರಂಭಿಸಲು ಸರಕಾರ ಪೂರ್ವಭಾವಿ ಸಿದ್ಧತೆ ನಡೆಸಿದೆ ಎಂದು ಕೂಡ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ