ಆ್ಯಪ್ನಗರ

ರಾಯಚೂರು: ನಗರಸಭೆ ಸದಸ್ಯನ ಭೀಕರ ಹತ್ಯೆ, ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್‌!

​​ಈ ಘಟನೆ ಬಜಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಸಿಕ್ಕಂ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಮಕ್ಬೂಲ್ ಅವರನ್ನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

Vijaya Karnataka Web 29 Sep 2020, 1:07 pm
ರಾಯಚೂರು: ನಗರಸಭೆ ಸದಸ್ಯ 42 ವರ್ಷದ ಮಕ್ಬೂಲ್ ಎಂಬವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ನಗರದ ಜಾಕೀರ್ ಹುಸೇನ್ ವೃತ್ತದ ಬಳಿ ನಡುರಸ್ತೆಯಲ್ಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ರಾಯಚೂರು ನಗರಸಭೆ ವಾರ್ಡ್ ಸಂಖ್ಯೆ 8 ರ ಸದಸ್ಯ ಮಕ್ಬೂಲ್ ಈ ರಸ್ತೆಯಲ್ಲಿ ಸೋಮವಾರ ರಾತ್ರಿ ಬರುವ ವೇಳೆ ಅವರ ಮೇಲೆ ಎರಗಿದ ಐದು ಜನ ದುಷ್ಕರ್ಮಿಗಳು ಮಚ್ಚು ಲಾಂಗ್ ಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
Vijaya Karnataka Web raichur


ಈ ಘಟನೆ ಬಜಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಸಿಕ್ಕಂ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಮಕ್ಬೂಲ್ ಅವರನ್ನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಆರೋಪಿಗಳ ಮೇಲೆ ಫೈರಿಂಗ್‌!
ಇನ್ನು ಕೊಲೆಯ ಜಾಡು ಹಿಡಿದ ಪೊಲೀಸರಿಗೆ ಆರೋಪಿಗಳ ಜಾಡು ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ಪೊಲೀಸರು ತೆರಳಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲಿ ಯತ್ನಿಸಿದಾಗ ದುಷ್ಕರ್ಮಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಇನ್ನು ಫೈರಿಂಗ್‌ ವೇಳೆ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ರಾಯಚೂರು: ಕುಸಿದು ಬಿದ್ದ ಸೇತುವೆ ಪರಿಶೀಲನೆ ವೇಳೆ ಮತ್ತೆ ಕುಸಿತ, ಶಾಸಕ ಪಾರು

ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯಗೊಂಡಿದ್ದು ಅವರನ್ನು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ರಾಯಚೂರಿನ ಬೊಳ್ಳಮಾನದೊಡ್ಡಿ ರಸ್ತೆ ಬಳಿ ನಡೆದಿದೆ. ಕಳೆದ ಆರೇಳು ತಿಂಗಳ ಹಿಂದೆ ಮಕ್ಬೂಲ್ ಸಹೋದರ ಸಹ ಕೊಲೆಯಾಗಿದ್ದ. ಹೀಗಾಗಿ ಹಳೆಯ ವೈಷಮ್ಯದ ಕಾರಣಕ್ಕೆ ಕೊಲೆ ನಡೆದಿರಬಹುದು ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ