ಆ್ಯಪ್ನಗರ

ರಾಯಚೂರು: ಕಾರು ಅಪಘಾತ, ಲಿಂಗಸುಗೂರು ವ್ಯಕ್ತಿ ಸಾವು

ರಸ್ತೆ ಅಪಘಾತದಲ್ಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದ ಬಸ್ ಡಿಪೋ ಬಳಿ ನಡೆದಿದೆ. ಲಿಂಗಸಗೂರು ಕಡೆಯಿಂದ ಸಿಂಧನೂರು ಕಡೆ ಹೊರಟಿದ್ದ ಕಾರ್ ಗೆ ಹಿಂದುಗಡೆಯಿಂದ ಬರುತ್ತಿದ್ದ ಮತ್ತೊಂದು ಕಾರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ, ಲಿಂಗಸುಗೂರಿನ ಸದಾನಂದಪ್ಪ ಮೃತಪಟ್ಟಿದ್ದಾರೆ.

Vijaya Karnataka Web 13 Oct 2020, 11:54 am
ರಾಯಚೂರು: ರಸ್ತೆ ಅಪಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಜಿಲ್ಲೆಯ ಮಸ್ಕಿ ಪಟ್ಟಣದ ಬಸ್ ಡಿಪೋ ಬಳಿ ಈ ಘಟನೆ ನಡೆದಿದೆ.
Vijaya Karnataka Web ಸಾಂದರ್ಭಿಕ ಚಿತ್ರ


ಲಿಂಗಸುಗೂರಿನ ಸದಾನಂದಪ್ಪ (52) ಕಾರು ಅಪಘಾತದಿಂದ ಮೃತಪಟ್ಟ ದುರ್ದೈವಿ.

ಲಿಂಗಸಗೂರು ಕಡೆಯಿಂದ ಸಿಂಧನೂರು ಕಡೆ ಹೊರಟಿದ್ದ ಕಾರ್ ಗೆ ಹಿಂದುಗಡೆಯಿಂದ ಬರುತ್ತಿದ್ದ ಮತ್ತೊಂದು ಕಾರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ, ಲಿಂಗಸುಗೂರಿನ ಸದಾನಂದಪ್ಪ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಸದಾನಂದಪ್ಪ ತಾಯಿ‌ ಸಾವನ್ನಪ್ಪಿದ್ದರಿಂದ ಲಿಂಗಸುಗೂರಿಗೆ ಬಂದಿದ್ದರು. ಕಾರ್ಯಕ್ರಮ ಮುಗಿಸಿ ಪತ್ನಿ ಜತೆ ಬೆಂಗಳೂರಿಗೆ ಹಿಂತಿರುಗಿ ಹೋಗುವಾಗ ಈ ದುರ್ಘಟನೆ ನಡೆದಿದೆ. ಕಾರು ಚಾಲನೆ ಮಾಡುತ್ತಿದ್ದಾಗ ಫೀಟ್ಸ್ ಬಂದ ಕಾರಣ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆಯೆನ್ನಲಾಗಿದೆ.

108 ವಾಹನದಲ್ಲಿ ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿದ್ದು, ಮಸ್ಕಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ