ಆ್ಯಪ್ನಗರ

ಆನಲೈನ್‌ ಔಷಧಿ ಮಾರಾಟಕ್ಕೆ ವಿರೋಧ

ಆನಲೈನ್‌ನಲ್ಲಿ ಔಷಧ ಮಾರಾಟದ ವ್ಯವಸ್ಥೆಯನ್ನು ತರಾತುರಿಯಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಕೇಂದ್ರ ಸರಕಾರದ ಕ್ರಮ ವಿರೋಧಿಸಿ, ತಾಲೂಕು ಔಷಧ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು, ಸಹಾಯಕ ಆಯುಕ್ತರಿಗೆ ಗುರುವಾರ ಮನವಿ ಸಲ್ಲಿಸಿದರು.

Vijaya Karnataka 28 Sep 2018, 5:00 am
ಲಿಂಗಸುಗೂರು : ಆನಲೈನ್‌ನಲ್ಲಿ ಔಷಧ ಮಾರಾಟದ ವ್ಯವಸ್ಥೆಯನ್ನು ತರಾತುರಿಯಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಕೇಂದ್ರ ಸರಕಾರದ ಕ್ರಮ ವಿರೋಧಿಸಿ, ತಾಲೂಕು ಔಷಧ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು, ಸಹಾಯಕ ಆಯುಕ್ತರಿಗೆ ಗುರುವಾರ ಮನವಿ ಸಲ್ಲಿಸಿದರು.
Vijaya Karnataka Web RAC-RCH27LNG02


ಕೇಂದ್ರ ಸರಕಾರವು ಕಾನೂನಾತ್ಮಕವಲ್ಲದ ರೀತಿಯಲ್ಲಿ ಇ-ಫಾರ್ಮಸಿ ಯೋಜನೆ ಜಾರಿಗೊಳಿಸಲು ಮುಂದಾಗುತ್ತಿರುವುದು ಗ್ರಾಹಕರ ಹಿತಕ್ಕೆ ಧಕ್ಕೆಯಾಗಲಿದೆ. ಸರಕಾರದ ಈ ಯೋಜನೆ ವಿರೋಧಿಸಿ, ಸೆ.28ರಂದು ಔಷಧ ಅಂಗಡಿಗಳನ್ನು ಬಂದ್‌ ಮಾಡಲಾಗುವುದು. ಈ ಯೋಜನೆಯನ್ನು ಕೂಡಲೇ ಕೈಬಿಡಬೇಕು ಔಷಧ ವ್ಯಾಪಾರಿಗಳು ಆಗ್ರಹಿಸಿದರು.

ಸಂಘದ ಮುಖಂಡರಾದ ನಾರಾಯಣಪ್ಪ ಚೌದ್ರಿ, ದೊಡ್ಡಪ್ಪ ಸಾಹುಕಾರ, ಸತ್ಯಾನಾರಾಯಣ ಚೌದ್ರಿ, ಸುಬಾಷ್‌ ಪಲ್ಲೇದ್‌, ರಾಜಶೇಖರ್‌ ಫೂಲಬಾವಿ, ಆದಪ್ಪ ಮೇಟಿ, ಖಾಜಾ ಬಂದೇನವಾಜ್‌, ರವಿ ಚೌದ್ರಿ, ಶಿವಶಂಕರ ಹೊನ್ನಳ್ಳಿ, ಸರಳಾಕ್ಷ ಹಾಗೂ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ