ಆ್ಯಪ್ನಗರ

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಗೆ ವಿರೋಧ

ಕೇಂದ್ರದಲ್ಲಿನ ಬಿಜೆಪಿ ಸರಕಾರ ಇಂಧನ ಬೆಲೆಯನ್ನು ಪದೇ, ಪದೆ ಹೆಚ್ಚಿಸುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕೊಪ್ಪಳ ಲೋಕಸಭಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸನಗೌಡ ಬಾದರ್ಲಿ ಖಂಡಿಸಿದರು.

ವಿಕ ಸುದ್ದಿಲೋಕ 1 Apr 2016, 4:45 am
ಸಿಂಧನೂರು; ಕೇಂದ್ರದಲ್ಲಿನ ಬಿಜೆಪಿ ಸರಕಾರ ಇಂಧನ ಬೆಲೆಯನ್ನು ಪದೇ, ಪದೆ ಹೆಚ್ಚಿಸುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕೊಪ್ಪಳ ಲೋಕಸಭಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸನಗೌಡ ಬಾದರ್ಲಿ ಖಂಡಿಸಿದರು.
Vijaya Karnataka Web petrol diesel price hike protest
ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಗೆ ವಿರೋಧ


ಇಲ್ಲಿನ ಯೂತ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ತಹಸೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ, ಜನರಿಗೆ ಸುಳ್ಳು ಭರವಸೆ ನೀಡುವ ಮೂಲಕ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತತ್ವದ ಬಿಜೆಪಿ ಸರಕಾರದ ನಡೆ ಜನ ವಿರೋಧಿ ಎನ್ನುವುದು ಜಗಜ್ಜಾಹೀರಾಗಿದೆ. ಬಿಜೆಪಿ ಆಡಳಿತ ಕಾರ್ಯವೈಖರಿಯಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಜನರಿಗೆ ದಿನನಿತ್ಯ ಬಳಕೆಗೆ ಯೋಗ್ಯವಾದ ಎಲ್ಲ ವಸ್ತುಗಳ ಬೆಲೆಯನ್ನು ಏರಿಕೆ ಮಾಡಲಾಗುತ್ತಿದೆ. ಇದರಿಂದ ಜನ ಸಾಮಾನ್ಯರು ಜೀವನ ನಡೆಸುವುದು ಕಷ್ಟವಾಗಿದೆ. ಹಿಂದೆ ಇದ್ದ ಯುಪಿಎ ಸರಕಾರ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರಲ್‌ಗೆ 140 ಡಾಲರ್ ಇತ್ತು. ಆಗ ಪೆಟ್ರೋಲ್ ಬೆಲೆ ಲೀಟರ್‌ಗೆ 63 ರೂ. ಸಿಗುತ್ತಿತ್ತು. ಪ್ರಸ್ತುತ ಕಚ್ಚಾತೈಲ ಬೆಲೆ ಪ್ರತಿ ಬ್ಯಾರಲ್‌ಗೆ 43 ಡಾಲರ್‌ಗೆ ಸಿಗುತ್ತಿದ್ದರೂ ಪೆಟ್ರೋಲ್ ಬೆಲೆ ಲೀಟರ್‌ಗೆ 60 ರೂ. ಏರಿಕೆ ಮಾಡಿದ್ದು, ದಿನ ಬಳಕೆಯ ವಸ್ತುಗಳ ದರ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಖಾಜಿಮಲ್ಲಿಕ, ಅಲ್ಲಮಪ್ರಬು, ಮುರ್ತುಜಾ, ಶಾಹೀನ್, ಸಿದ್ದಲಿಂಗ ಹೂಗಾರ, ಜಮೀರ್, ಸಲ್ಮಾನ್, ಬಸವರಾಜ ಮುರಾರಿ, ಗೌಸ್ ಚೌದ್ರಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ