ಆ್ಯಪ್ನಗರ

ಆರೋಪ ಸಾಬೀತು: ವ್ಯಕ್ತಿ ಆತ್ಮಹತ್ಯೆಗೆ ಯತ್ನ

ನಗರದ ಜಿಲ್ಲಾ ನ್ಯಾಯಾಲಯದ ಮೇಲಿನಿಂದ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

Vijaya Karnataka 12 Oct 2018, 12:00 am
ರಾಯಚೂರು: ನಗರದ ಜಿಲ್ಲಾ ನ್ಯಾಯಾಲಯದ ಮೇಲಿನಿಂದ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
Vijaya Karnataka Web prosecution to prove a person attempts suicide
ಆರೋಪ ಸಾಬೀತು: ವ್ಯಕ್ತಿ ಆತ್ಮಹತ್ಯೆಗೆ ಯತ್ನ


ಗಾಯಾಳುವನ್ನು ನಗರದ ಅಂಬೇಡ್ಕರ್ ನಗರದ ನಿವಾಸಿ ಶಂಕ್ರಪ್ಪ(55) ಎಂದು ಗುರುತಿಸಲಾಗಿದೆ. ತನ್ನ ಪತ್ನಿಯನ್ನು ಕೊಲೆ ಮಾಡಿದ ಹಿನ್ನೆಲೆಯಲ್ಲಿ ವಿಚಾರಣೆ ಎದುರಿಸುತ್ತಿದ್ದ. ವಾದ ಆಲಿಸಿದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಗುರುವಾರ ತೀರ್ಪು ಪ್ರಕಟಿಸುವುದಾಗಿ ಘೋಷಿಸಿದ್ದರು. ಆರೋಪ ಸಾಬೀತಾಗಿತ್ತು. ಅಧಿಕೃತವಾಗಿ ಶಿಕ್ಷೆ ಪ್ರಕಟಗೊಳ್ಳುವುದು ಬಾಕಿಯಿತ್ತು. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಕರೆತಂದಿದ್ದರು. ಈ ವೇಳೆ ಶಂಕ್ರಪ್ಪ ದಿಢೀರ್ ನ್ಯಾಯಾಲಯದ ಕಟ್ಟಡದ ಮೇಲೇರಿ ಅಲ್ಲಿಂದ ಜಿಗಿದಿದ್ದಾನೆ. ಆತನ 2 ಕಾಲು ಮುರಿದಿದ್ದು, ಹಣೆಗೆ ತೀವ್ರ ಪೆಟ್ಟಾಗಿದೆ. ಚಿಕಿತ್ಸೆಗಾಗಿ ಪೊಲೀಸರು ಆತನನ್ನು ರಿಮ್ಸ್‌ಗೆ ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ