ಆ್ಯಪ್ನಗರ

ಗುರ್ಜಾಪುರ ಗ್ರಾಮಸ್ಥರಿಂದ ಪ್ರತಿಭಟನೆ

ತಾಲೂಕಿನ ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿಉಂಟಾದ ನೆರೆ ಹಾವಳಿಯಿಂದ ರೈತರ ಪರಿಸ್ಥಿತಿ ಬೀದಿಗೆ ಬಂದಿದ್ದು, ಜಿಲ್ಲಾಡಳಿತ ಗ್ರಾಮಗಳನ್ನು ಸ್ಥಳಾಂತರಿಸಿ ಶಾಶ್ವತ ಪರಿಹಾರ ಕೈಗೊಳ್ಳಲು ಆಗ್ರಹಿಸಿ ಗುರ್ಜಾಪುರ ಗ್ರಾಮಸ್ಥರು ಗುರುವಾರ ಡಿಸಿ ಕಚೇರಿ ಮುಂದೆ ಪ್ರತಿಭಟಿಸಿದರು.

Vijaya Karnataka 20 Sep 2019, 3:51 pm
ರಾಯಚೂರು; ತಾಲೂಕಿನ ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿಉಂಟಾದ ನೆರೆ ಹಾವಳಿಯಿಂದ ರೈತರ ಪರಿಸ್ಥಿತಿ ಬೀದಿಗೆ ಬಂದಿದ್ದು, ಜಿಲ್ಲಾಡಳಿತ ಗ್ರಾಮಗಳನ್ನು ಸ್ಥಳಾಂತರಿಸಿ ಶಾಶ್ವತ ಪರಿಹಾರ ಕೈಗೊಳ್ಳಲು ಆಗ್ರಹಿಸಿ ಗುರ್ಜಾಪುರ ಗ್ರಾಮಸ್ಥರು ಗುರುವಾರ ಡಿಸಿ ಕಚೇರಿ ಮುಂದೆ ಪ್ರತಿಭಟಿಸಿದರು.
Vijaya Karnataka Web protest by gurjapur villagers
ಗುರ್ಜಾಪುರ ಗ್ರಾಮಸ್ಥರಿಂದ ಪ್ರತಿಭಟನೆ


ಮಹಾರಾಷ್ಟ್ರದ ಅಣೆಕಟ್ಟುಗಳಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿಬಿಡುವ ಹಿನ್ನೆಲೆಯಲ್ಲಿಪ್ರತಿವರ್ಷ ಉತ್ತರ ಕರ್ನಾಟಕ ಸೇರಿ ಜಿಲ್ಲೆಯ ನದಿ ತಟದ ಗ್ರಾಮಗಳಲ್ಲಿಪ್ರವಾಹ ಪರಿಸ್ಥಿತಿ ಎದುರಾಗುತ್ತಿದೆ. ಕಳೆದ ತಿಂಗಳು ಉಂಟಾದ ಪ್ರವಾಹದಿಂದ ಗುರ್ಜಾಪುರ ಸೇರಿ ನಾನಾ ಗ್ರಾಮಗಳು ಸಂಪೂರ್ಣ ಮುಳುಗಡೆಯಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಭತ್ತ, ಹತ್ತಿ, ತೊಗರಿ ಸೇರಿ ಇತರೆ ಬೆಳೆಗಳು ಪ್ರವಾಹದಿಂದ ಕೊಚ್ಚಿ ಹೋಗಿದ್ದು ರೈತರ ಬದುಕು ಬೀದಿಗೆ ಬರುವಂತಾಗಿದೆ. ಜಿಲ್ಲಾಡಳಿತ ಪ್ರತಿವರ್ಷ ನಿರಾಶ್ರಿತ ಕೇಂದ್ರಗಳನ್ನು ಸ್ಥಾಪಿಸುವುದನ್ನು ಕೈಬಿಟ್ಟು ಈ ಪ್ರವಾಹಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಅಗತ್ಯವಾಗಿದೆ.

ಗುರ್ಜಾಪುರ ಗ್ರಾಮವನ್ನು ಸ್ಥಳಾಂತರಿಸಲು ಸೂಕ್ತ ಕ್ರಮಕೈಗೊಳ್ಳಬೇಕು. ಕಳೆದ ತಿಂಗಳು ಬಂದ ಪ್ರವಾಹದಲ್ಲಿ60 ಮನೆಗಳು ಮುಳುಗಡೆಯಾಗಿದ್ದರೂ ಎಲ್ಲಫಲಾನುಭವಿಗಳಿಗೆ ಪರಿಹಾರ ಬಂದಿಲ್ಲ. ಈ ನಿಟ್ಟಿನಲ್ಲಿಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳಲು ಆಗ್ರಹಿಸಿದರು. ಗ್ರಾಮಸ್ಥರಾದ ವಿರುಪಾಕ್ಷಿಗೌಡ, ರಾಮಚಂದ್ರನಾಯಕ, ದೇವಿಂದ್ರಪ್ಪ, ರಂಗಾರೆಡ್ಡಿ, ಶರಣಪ್ಪ, ವೆಂಕಟೇಶ, ಹನುಮಂತು ಸೇರಿ ಇತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ