ಆ್ಯಪ್ನಗರ

​ಸಾವಿರ ಕೋಟಿ ರೂ. ಕಪ್ಪ ಸಾಬೀತುಪಡಿಸಲಿ: ಜಾರಕಿಹೊಳಿ

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ ಹೈಕಮಾಂಡ್‌ಗೆ ಒಂದು ಸಾವಿರ ಕೋಟಿ ರೂ. ನೀಡಿದ್ದಾರೆ ಎಂದು ಯಡಿಯೂರಪ್ಪ ಅವರು ಮಾಡಿರುವ ಆರೋಪ ನಿರಾಧಾರ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ವಿಕ ಸುದ್ದಿಲೋಕ 11 Feb 2017, 4:37 pm
ರಾಯಚೂರು: ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಹೈಕಮಾಂಡ್‌ಗೆ ಸಾವಿರ ಕೋಟಿ ರೂ. ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ಬಿ.ಎಸ್‌. ಯಡಿಯೂರಪ್ಪ ಅವರು ಮಾಡಿರುವ ಆರೋಪವು ನಿರಾಧಾರ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
Vijaya Karnataka Web prove money to highcomand issue jarkiholi
​ಸಾವಿರ ಕೋಟಿ ರೂ. ಕಪ್ಪ ಸಾಬೀತುಪಡಿಸಲಿ: ಜಾರಕಿಹೊಳಿ


ರಾಯಚೂರಿನಲ್ಲಿ ಮಾತನಾಡಿದ ಅವರು, ಆರೋಪವನ್ನು ದಾಖಲೆಗಳೊಂದಿಗೆ ಸಾಬೀತು ಮಾಡಲಿ. ಜವಾಬ್ದಾರಿ ಸ್ಥಾನದಲ್ಲಿರುವವರು ಬೇಜವಾಬ್ದಾರಿ ಹೇಳಿಕೆ ನೀಡಬಾರದು. ಗೋವಿಂದರಾಜ್ ಡೈರಿ ಬಗ್ಗೆ ತನಿಖೆಯಾಗಲಿ. ಸತ್ಯಾಸತ್ಯತೆ ಹೊರಬರುತ್ತದೆ ಎಂದರು.


ಈ ಹಿಂದೆ ಮೂರು ಸಚಿವರು ಜೈಲಿಗೆ ಹೋಗುತ್ತಾರೆ ಎಂದು ಯಡಿಯೂರಪ್ಪ ಹೇಳಿದ್ದರು. ಈಗ ಸಹಸ್ರಾರು ಕೋಟಿ ಬಗ್ಗೆ ಮಾತನಾಡಿದ್ದಾರೆ. ಐಟಿ ದಾಳಿ ಯಾರ ಮನೆ ಮೇಲೆ ಬೇಕಾದರೂ ನಡೆಯಬಹುದು. ಆರೋಪಗಳು ಸಾಬೀತಾಗಬೇಕು. ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರುತ್ತೇವೆ ಎಂದು ಅವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ