ಆ್ಯಪ್ನಗರ

ಸಿಎಂ ಬಿಎಸ್‌ವೈ ಜೊತೆ ವೇದಿಕೆಯಲ್ಲಿದ್ದ ಸಂಸದ ರಾಜಾ ಅಮರೇಶ್ವರ ನಾಯಕ್‌ಗೆ ಕೊರೊನಾ ಪಾಸಿಟಿವ್!

ಎರಡು ದಿನಗಳ ಹಿಂದೆ ಯಾದಗಿರಿಯಲ್ಲಿ ನಡೆದ ಮೆಡಿಲ್‌ ಕಾಲೇಜು ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಅವರ ಜತೆ ರಾಜಾ ಅಮರೇಶ್ವರ ನಾಯಕ ಪಾಲ್ಗೊಂಡಿದ್ದರು. ಇದೀಗ ಅವರಿಗೆ ಕೊರೊನಾ ದೃಢಪಡುವ ಮೂಲಕ ಅವರೊಂದಿಗೆ ವೇದಿಕೆ ಹಂಚಿಕೊಂಡವರಿಗೆ ಭಯ ಎದುರಾಗಿದೆ.

Vijaya Karnataka Web 9 Jan 2021, 12:13 pm
ರಾಯಚೂರು: ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎರಡು ದಿನಗಳ ಹಿಂದೆ ಯಾದಗಿರಿಯಲ್ಲಿ ನಡೆದ ಮೆಡಿಲ್‌ ಕಾಲೇಜು ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಅವರ ಜತೆ ರಾಜಾ ಅಮರೇಶ್ವರ ನಾಯಕ ಪಾಲ್ಗೊಂಡಿದ್ದರು.
Vijaya Karnataka Web amareswhar naik


ಹೀಗಾಗಿ ಸಮಾರಂಭದಲ್ಲಿ ಪಾಲ್ಗೊಂಡ ಎಲ್ಲರಿಗೂ ಇದೀಗ ಕೊರೊನಾ ಭೀತಿ ಎದುರಾಗಿದೆ. ಇನ್ನು ನಾಲ್ಕು ದಿನಗಳ ಹಿಂದೆ ನಗರದ ಜಿ.ಪಂ. ಸಭಾಂಗಣದಲ್ಲಿ ದಿಶಾ ಸಭೆಯಲ್ಲೂ ಸಂಸದ ರಾಜಾ ಅಮರೇಶ್ವರ ನಾಯಕ ಪಾಲ್ಗೊಂಡಿದ್ದರು.ಸದ್ಯ ಚಿಕಿತ್ಸೆಗಾಗಿ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ಸಂಸದರು ದಾಖಲಾಗಿದ್ದಾರೆ. ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅಮರೇಶ್ವರ ನಾಯ್ಕ್‌

ಕಳೆದ ವರ್ಷ ದೇಶಕ್ಕೆ ಕಾಲಿಟ್ಟ ಕೊರೊನಾ ಹಲವರ ಪ್ರಾಣ ಕಸಿದಿದೆ. ಅದರಲ್ಲೂ ಹಲವು ಗಣ್ಯರು ಕೊರೊನಾಗೆ ಬಲಿಯಾಗಿದ್ದಾರೆ. ಅನೇಕ ರಾಜಕೀಯ ನಾಯಕರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಕೆಲ ತಿಂಗಳ ಹಿಂದೆ ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಚಿಕಿತ್ಸೆ ಪಡೆದ ನಂತರ ಗುಣಮುಖರಾಗಿದ್ದರು.

ಮತ ಎಣಿಕೆಯಿಂದ ರಿಸೆಪ್ಷನ್ ಗೆ ಅಡ್ಡಿ: ಎಣಿಕೆ ವೀಕ್ಷಿಸಲು ಬಂದವರು ಮದುವೆ ಊಟಕ್ಕೆ ಹಾಜರ್!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ