ಆ್ಯಪ್ನಗರ

ರೈಲ್ವೆ ಸಿಬ್ಬಂದಿಗೆ ಪಿಂಚಣಿ ಕಲ್ಪಿಸಲು ಆಗ್ರಹ

ರೈಲ್ವೆ ಸಿಬ್ಬಂದಿಗೆ ಪಿಂಚಣಿ ವ್ಯವಸ್ಥೆ ಕಲ್ಪಿಸುವುದು ಸೇರಿ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ದಕ್ಷಿಣ ಮಧ್ಯ ರೈಲ್ವೆ ಮಜ್ದೂರ್‌ ಯೂನಿಯನ್‌ ಸಂಘದ ಪದಾಧಿಕಾರಿಗಳು, ನಗರದ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

Vijaya Karnataka 20 Sep 2018, 5:00 am
ರಾಯಚೂರು : ರೈಲ್ವೆ ಸಿಬ್ಬಂದಿಗೆ ಪಿಂಚಣಿ ವ್ಯವಸ್ಥೆ ಕಲ್ಪಿಸುವುದು ಸೇರಿ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ದಕ್ಷಿಣ ಮಧ್ಯ ರೈಲ್ವೆ ಮಜ್ದೂರ್‌ ಯೂನಿಯನ್‌ ಸಂಘದ ಪದಾಧಿಕಾರಿಗಳು, ನಗರದ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
Vijaya Karnataka Web RAC-RCH19HD05


2004ರಿಂದ ರೈಲ್ವೆ ಇಲಾಖೆಗೆ ನೇಮಕವಾದ ಸಿಬ್ಬಂದಿಗೆ ಪಿಂಚಣಿ ಸೌಲಭ್ಯ ಕಲ್ಪಿಸಿಲ್ಲ. ಕೂಡಲೇ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು. 7ನೇ ವೇತನ ಆಯೋಗದ ವರದಿ ಜಾರಿ ಸಮಯದಲ್ಲಿ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಮಜ್ದೂರ್‌ ವೇತನ ತಾರತಮ್ಯವಾಗಿದ್ದು ಕೂಡಲೇ ಸರಿಪಡಿಸಬೇಕು. ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬುದು ಸೇರಿ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥ ಈರಣ್ಣ, ಆರ್‌.ಕೃಷ್ಣ, ಓಬಳೇಶ, ಅಕ್ಷ ಯ ಜ್ಯೋತಿ ಸೇರಿ ಸಂಘದ ಇತರ ಪದಾಧಿಕಾರಿಗಳು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ