ಆ್ಯಪ್ನಗರ

ಸಂಧಾನ ವಿಳಂಬ ಬೇಡ, ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು: ಮಂತ್ರಾಲಯ ಶ್ರೀ

ಭಗವಾನ್ ಶ್ರೀರಾಮನ ಜನ್ಮಭೂಮಿಯಲ್ಲೇ ಭವ್ಯ ರಾಮ ಮಂದಿರ ನಿರ್ಮಾಣವಾಗಬೇಕು. ಸಂಧಾನ ಪ್ರಕ್ರಿಯೆ ವಿಳಂಬವಾಗಬಾರದು. ಶಾಂತಿಯುತವಾಗಿ ಸಮಸ್ಯೆ ಬಗೆಹರಿಯಬೇಕು ಎಂದು ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ.

Vijaya Karnataka Web 8 Mar 2019, 12:17 pm
ಮಂತ್ರಾಲಯ: ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು. ಆದರೆ ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ಸಮಸ್ಯೆ ಪರಿಹಾರ ಕಾಣಬೇಕು. ಎರಡೂ ಕಡೆಯವರ ಒಳಿತಿಗೂ ಗಮನಕೊಡುವುದು ಮುಖ್ಯ. ಸಂಧಾನ ಪ್ರಕ್ರಿಯೆ ವಿಳಂಬವಾಗುವುದು ಬೇಡ. ತ್ವರಿತವಾಗಿ ಸಂಧಾನ ಕೈಗೊಂಡು ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸಲು ಮುಂದಾಗುವುದು ಸೂಕ್ತ ಎಂದು ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳು ಹೇಳಿದ್ದಾರೆ.
Vijaya Karnataka Web Mantralaya- Subudhendra theertha Swamiji


ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನ ಇಂದಿನ ಆದೇಶಕ್ಕೆ ಮಂತ್ರಾಲಯ ಶ್ರೀಗಳು ಈ ಪ್ರತಿಕ್ರಿಯೆ ನೀಡಿದರು.

ಮಂತ್ರಾಲಯದಲ್ಲಿ ಶ್ರೀಗುರುವೈಭವೋತ್ಸವ ನಡೆಯುತ್ತಿದೆ. ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮಹೋತ್ಸವದ ಸ್ಮರಣೆಯ ಅಂಗವಾಗಿ ಪ್ರಸ್ತುತ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ರಾಯರ ಪಾದುಕೆಗೆ ಅಭಿಷೇಕ ನೆರೆವೇರಿಸಿದರು.


ಉಗ್ರರ ದಮನದಲ್ಲಿ ರಾಜಕೀಯ ಬೇಡ:
ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದ್ದರ ಬಗ್ಗೆ ಸಂಶಯ ಬೇಡ. ಈ ನಿಟ್ಟಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ದೇಶದ ಸೈನಿಕರ ಪ್ರಾಮಾಣಿಕತೆ ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ದೇಶದ ಭದ್ರತೆ ವಿಚಾರದಲ್ಲಿ ಆರೋಪ ಮಾಡುವುದು ಸಲ್ಲದು. ಉಗ್ರರ ದಮನದ ವಿರುದ್ಧ ಮಾತನಾಡುವುದು ದೇಶಕ್ಕೆ ಒಳಿತು ಉಂಟುಮಾಡದು. ದೇಶದ ಸುರಕ್ಷತೆಗೆ ಎಲ್ಲರೂ ಬೆಂಬಲಿಸಬೇಕು ಎಂದು ಶ್ರೀಗಳು ನುಡಿದರು.

ಮಾ.12 ರಂದು ದೇಶ ಕಾಯುವ ಸೈನಿಕರ ಹಿತಕ್ಕಾಗಿ ಮಹಾರುದ್ರಯಾಗ ಆಯೋಜಿಸಲಾಗಿದೆ ಎಂದು ಸ್ವಾಮೀಜಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ