ಸಿಂಧನೂರು ; ತಾಲೂಕಿನ ಬೂದಿವಾಳಕ್ಯಾಂಪ್ ಕ್ಯಾಂಪ್, ಅಮರಾಪುರ, ಉಪ್ಪಳ, ಕಲಮಂಗಿ, ಬೋಗಾಪುರ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘದಿಂದ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡರಿಗೆ ಮನವಿ ಸಲ್ಲಿಸಲಾಯಿತು.
ಬೇಸಿಗೆ ಬಿಸಲು ಹೆಚ್ಚಿದ್ದರಿಂದ ನೀರಿನ ಸಮಸ್ಯೆ ತಲೆದೋರಿದೆ. ಆಯಾ ಗ್ರಾಮಗಳ ಹರಿಜನ ಕೇರಿ ಸೇರಿ ಹಲವು ಕಡೆಗಳಲ್ಲಿ ಸಮಸ್ಯೆ ಪರಿಹರಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮೌಖಿಕವಾಗಿ ವಿನಂತಿಸಲಾಗಿದೆ. ಆದರೆ ಯಾವುದೇ ರೀತಿಯ ಸೂಕ್ತ ಸ್ಪಂದನೆ ದೊರೆತಿಲ್ಲ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಜನ, ಜಾನುವಾರುಗಳಿಗೆ ತೊಂದರೆಯಾಗದಂತೆ ಎಚ್ಚರಿಕೆವಹಿಸಬೇಕು ಎಂದು ಮನವಿ ಮಾಡಿದರು.
ಸಂಘಟನೆಯ ಅಧ್ಯಕ್ಷ ರಮೇಶ ಪಾಟೀಲ್ ಬೇರ್ಗಿ, ಆರ್ವೈಎಫ್ಐ ರಾಜ್ಯ ಸಂಚಾಲಕ ನಾಗರಾಜ ಪೂಜಾರ್, ರಾಘವೇಂದ್ರ ಉಪ್ಪಳ, ಟಿಯುಸಿಐ ಜಿಲ್ಲಾ ಉಪಾಧ್ಯಕ್ಷ ಬಿ.ಎನ್.ಯರದಿಹಾಳ, ರಾಮಣ್ಣ ನಾಯಕ, ಕೆ.ವೆಂಕಟೇಶ ಸೇರಿ ಇತರರು ಇದ್ದರು.
ಬೇಸಿಗೆ ಬಿಸಲು ಹೆಚ್ಚಿದ್ದರಿಂದ ನೀರಿನ ಸಮಸ್ಯೆ ತಲೆದೋರಿದೆ. ಆಯಾ ಗ್ರಾಮಗಳ ಹರಿಜನ ಕೇರಿ ಸೇರಿ ಹಲವು ಕಡೆಗಳಲ್ಲಿ ಸಮಸ್ಯೆ ಪರಿಹರಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮೌಖಿಕವಾಗಿ ವಿನಂತಿಸಲಾಗಿದೆ. ಆದರೆ ಯಾವುದೇ ರೀತಿಯ ಸೂಕ್ತ ಸ್ಪಂದನೆ ದೊರೆತಿಲ್ಲ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಜನ, ಜಾನುವಾರುಗಳಿಗೆ ತೊಂದರೆಯಾಗದಂತೆ ಎಚ್ಚರಿಕೆವಹಿಸಬೇಕು ಎಂದು ಮನವಿ ಮಾಡಿದರು.
ಸಂಘಟನೆಯ ಅಧ್ಯಕ್ಷ ರಮೇಶ ಪಾಟೀಲ್ ಬೇರ್ಗಿ, ಆರ್ವೈಎಫ್ಐ ರಾಜ್ಯ ಸಂಚಾಲಕ ನಾಗರಾಜ ಪೂಜಾರ್, ರಾಘವೇಂದ್ರ ಉಪ್ಪಳ, ಟಿಯುಸಿಐ ಜಿಲ್ಲಾ ಉಪಾಧ್ಯಕ್ಷ ಬಿ.ಎನ್.ಯರದಿಹಾಳ, ರಾಮಣ್ಣ ನಾಯಕ, ಕೆ.ವೆಂಕಟೇಶ ಸೇರಿ ಇತರರು ಇದ್ದರು.