ಆ್ಯಪ್ನಗರ

ಶುಲ್ಕದ ವಿವರ ಪ್ರಕಟಿಸಲು ಮನವಿ

ತಾಲೂಕಿನಲ್ಲಿರುವ ಖಾಸಗಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಂದ ಪಡೆಯುತ್ತಿರುವ ಶುಲ್ಕದ ವಿವರ ಶಾಲೆಯ ಸೂಚನಾ ಫಲಕದಲ್ಲಿ ಪ್ರಕಟಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ ಕ್ಷೇತ್ರ ಶಿಕ್ಷ ಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 8 Jun 2018, 5:00 am
ಸಿಂಧನೂರು : ತಾಲೂಕಿನಲ್ಲಿರುವ ಖಾಸಗಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಂದ ಪಡೆಯುತ್ತಿರುವ ಶುಲ್ಕದ ವಿವರ ಶಾಲೆಯ ಸೂಚನಾ ಫಲಕದಲ್ಲಿ ಪ್ರಕಟಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ ಕ್ಷೇತ್ರ ಶಿಕ್ಷ ಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web RAC-RCH7SND3


ಉಚಿತ ಮತ್ತು ಕಡ್ಡಾಯ ಶಿಕ್ಷ ಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009ರಂತೆ ಖಾಸಗಿ ಶಾಲೆಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಮತ್ತು ನಿಗದಿತ ವಿದ್ಯಾರ್ಹತೆ ಹೊಂದಿದ ಶಿಕ್ಷ ಕರನ್ನು ನೇಮಕಾತಿ ಮಾಡಿಕೊಳ್ಳಬೇಕು. ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ರಾಜ್ಯ ಪಠ್ಯಕ್ರಮದ ಹಾಗೂ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪಠ್ಯಕ್ರಮವನ್ನು ಪಾಲನೆ ಮಾಡುತ್ತಿರುವ ಎಲ್ಲ ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಪೋಷಕರಿಂದ ಪಡೆಯುತ್ತಿರುವ ಶುಲ್ಕಗಳ ವಿವರಗಳನ್ನು ಶಾಲೆಯ ಸೂಚನಾಫಲಕದಲ್ಲಿ ಶೈಕ್ಷ ಣಿಕ ವರ್ಷ ಪ್ರಾರಂಭವಾಗುವ ಪೂರ್ವದಲ್ಲಿಯೇ ಪ್ರಕಟಿಸುವುದು ಕಡ್ಡಾಯವಿದೆ. ಆರ್‌ಟಿಇ ಕಾಯಿದೆ ಪ್ರಕಾರ ಮೂಲಸೌಕರ್ಯ ಹೊಂದ ಶಾಲೆಗಳ ಆಡಳಿತ ಮಂಡಳಿಗೆ ನೋಟಿಸ್‌ ನೀಡಬೇಕು ಎಂದು ಒತ್ತಾಯಿಸಲಾಯಿತು.

ಸಂಘಟನೆಯ ಉತ್ತರ ಕರ್ನಾಟಕ ವಿಭಾಗೀಯ ಅಧ್ಯಕ್ಷ ಏಸುರಾಜ, ಪ್ರಧಾನ ಕಾರ್ಯದರ್ಶಿ ಹರೀಶ್‌ ಮಟಮಾರಿ, ತಾಲೂಕಾಧ್ಯಕ್ಷ ವೀರೇಶ ರಾರಾವಿ, ಗೌರವಾಧ್ಯಕ್ಷ ವಲಿ, ತಾಲೂಕು ಸಂಚಾಲಕ ವೀರಯ್ಯಬೇರ್ಗಿ ಹಿರೇಮಠ, ಉಪಾಧ್ಯಕ್ಷ ಮರಿಸ್ವಾಮಿ, ನಾಗರಾಜ ಬಾದರ್ಲಿ, ಅಮರೇಶ, ವಿರೂಪಾಕ್ಷಿ ರಾರಾವಿ, ನಾಗರಾಜ ಗಸ್ತಿ ಸೇರಿ ಹಲವರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ