ಆ್ಯಪ್ನಗರ

ಕೆಎಸ್‌ಆರ್‌ಟಿಸಿ ನೌಕರರ ಸಮಸ್ಯೆ ಪರಿಹರಿಸಿ

ಕೆಎಸ್‌ಆರ್‌ಟಿಸಿ ನೌಕರರ ವಿವಿಧ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಯೂನಿಯನ್‌ ವತಿಯಿಂದ ನಗರದ ಆರ್‌ಟಿಒ ವೃತ್ತದ ಬಳಿಯಿರುವ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ಎದುರು ಮಂಗಳವಾರ ಪ್ರತಿಭಟನಾ ಧರಣಿ ನಡೆಸಲಾಯಿತು.

Vijaya Karnataka 29 May 2019, 5:00 am
ರಾಯಚೂರು : ಕೆಎಸ್‌ಆರ್‌ಟಿಸಿ ನೌಕರರ ವಿವಿಧ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಯೂನಿಯನ್‌ ವತಿಯಿಂದ ನಗರದ ಆರ್‌ಟಿಒ ವೃತ್ತದ ಬಳಿಯಿರುವ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ಎದುರು ಮಂಗಳವಾರ ಪ್ರತಿಭಟನಾ ಧರಣಿ ನಡೆಸಲಾಯಿತು.
Vijaya Karnataka Web RAC-RCH28HD06


ಕೇಂದ್ರ ಬಸ್‌ ನಿಲ್ದಾಣ ಆಧುನೀಕರಣಗೊಂಡು ಹಲವು ವರ್ಷ ಕಳೆದರೂ, ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವ ವಾಹನ ಚಾಲಕ ಹಾಗೂ ನಿರ್ವಾಹಕರಿಗೆ ವಿಶ್ರಾಂತಿ ಗೃಹದ ವ್ಯವಸ್ಥೆ ಮಾಡಿಲ್ಲ. ಕೆಎಸ್‌ಆರ್‌ಟಿಸಿ ನೌಕರರು ಇದರಿಂದ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ.

ಎಲ್‌ಎಂಎಸ್‌ ಯಂತ್ರ ಪುನರಾರಂಭಿಸಿ ನೌಕರರಿಗೆ ಎದುರಾಗುತ್ತಿರುವ ಸಮಸ್ಯೆ ನಿವಾರಿಸಬೇಕು. ಕಳೆದ ಮೂರು ವರ್ಷಗಳಿಂದ ಸಿಬ್ಬಂದಿಗಳಿಗೆ ಸಮವಸ್ತ್ರವಿತರಿಸುತ್ತಿಲ್ಲ, ಈ ಕೂಡಲೇ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಲಿಂಗಸೂಗೂರು ಘಟಕದಲ್ಲಿ ಆಡಳಿತ ವರ್ಗದ ದುರಹಂಕಾರದಿಂದ ಮಾನಸಿಕ ಕಿರುಕುಳ ನೀಡಲಾಗುತ್ತಿದೆ. ಸಿಬ್ಬಂದಿ ನೆಮ್ಮದಿಯಿಂದ ಕೆಲಸ ಮಾಡಲು ಬಿಡುತ್ತಿಲ್ಲ. ಎಲ್ಲ ಸಮಸ್ಯೆಗಳಿಗೂ ಕೆಳಹಂತದ ನೌಕರರನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತಿದೆ.

ಒಂದು ವಾರದ ಅವಧಿಯೊಳಗೆ ಗೈರು ಹಾಜರಾಗಿರುವ ಸಿಬ್ಬಂದಿಗೆ ರಜೆ ಮಂಜೂರು ಮಾಡಲು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಅಧಿಕಾರ ನೀಡಬೇಕು. ಪ್ರತಿ ವರ್ಷ ಅನುಸೂಚಿಗಳಿಗೆ ಮನಸೋ ಇಚ್ಛೆ ಒಟಿ ಕಡಿಮೆ ಮಾಡುವ ಪದ್ಧತಿ ನಿಲ್ಲಿಸಬೇಕು. ಕೈಗಾರಿಕಾ ಒಪ್ಪಂದದಂತೆ ಜಂಟಿ ಸರ್ವೆ ಮಾಡಿಸಿ ಅನುಸೂಚಿಗಳ ಸಮಯ ನಿಗದಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಶ್ರೀಶೈಲ ರೆಡ್ಡಿ, ಶರತ್‌ ಕುಮಾರ ಕಳಸ ವಕೀಲ ಸೇರಿ ಅನೇಕ ನೌಕರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ