ಆ್ಯಪ್ನಗರ

ಸರ್ಜಾಪುರ: ರಸ್ತೆ ನಿರ್ಮಾಣಕ್ಕೆ ಆಗ್ರಹ

ಚರಂಡಿ ಹೂಳೆತ್ತಿ ಸ್ವಚ್ಛತೆ ಕಾಪಾಡುವ ಜತೆಗೆ ರಸ್ತೆ ನಿರ್ಮಿಸುವಂತೆ ಆಗ್ರಹಿಸಿ, ಸರ್ಜಾಪುರ ಗ್ರಾಮದ ಕರವೇ ಕಾರ್ಯಕರ್ತರು ಹಾಗೂ ಗ್ರಾಮಸ್ಥರು, ಪಿಡಿಒಗೆ ಬುಧವಾರ ಮನವಿ ಸಲ್ಲಿಸಿದರು.

Vijaya Karnataka 27 Sep 2018, 5:00 am
ಲಿಂಗಸುಗೂರು : ಚರಂಡಿ ಹೂಳೆತ್ತಿ ಸ್ವಚ್ಛತೆ ಕಾಪಾಡುವ ಜತೆಗೆ ರಸ್ತೆ ನಿರ್ಮಿಸುವಂತೆ ಆಗ್ರಹಿಸಿ, ಸರ್ಜಾಪುರ ಗ್ರಾಮದ ಕರವೇ ಕಾರ್ಯಕರ್ತರು ಹಾಗೂ ಗ್ರಾಮಸ್ಥರು, ಪಿಡಿಒಗೆ ಬುಧವಾರ ಮನವಿ ಸಲ್ಲಿಸಿದರು.
Vijaya Karnataka Web RAC-RCH26LNG06


ಸರ್ಜಾಪುರ ಗ್ರಾಮದಲ್ಲಿ ಹಲವು ವರ್ಷಗಳಿಂದ ಚರಂಡಿಯ ತ್ಯಾಜ್ಯ ವಿಲೇವಾರಿ ಮಾಡಿಲ್ಲ. ಕೊಚ್ಚೆ ನೀರು ಸರಾಗವಾಗಿ ಹರಿಯುತ್ತಿಲ್ಲ. ಸಾಂಕ್ರಾಮಿಕ ರೋಗಳ ತಾಣವಾಗಿದೆ. ದುರ್ನಾತ ಬೀರುತ್ತಿದ್ದು, ಗ್ರಾಮಸ್ಥರಿಗೆ ತೊಂದರೆಯಾಗಿದೆ. ರಸ್ತೆಗಳು ತೀರಾ ಹದಗೆಟ್ಟಿದ್ದು, ಮಳೆ ಬಂದಾಗ ಸಂಚಾರ ದುಸ್ತರವಾಗಿದೆ. ಹಲವು ಬಾರಿ ಮನವಿ ಸಲ್ಲಿಸಿದರೂ ಗ್ರಾ.ಪಂ. ಆಡಳಿತ ನಿರ್ಲಕ್ಷ್ಯವಹಿಸಿದೆ. ಸಮಸ್ಯೆ ಪರಿಹರಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕರವೇ ಗ್ರಾಮ ಘಟಕದ ಅಧ್ಯಕ್ಷ ಜಿ.ಭಗೀರಥ, ನಿಜಗುಣ ಗುಂಟಿ ಹಾಗೂ ಇತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ