ಆ್ಯಪ್ನಗರ

ನ್ಯಾಯಾಲಯದ ಆದೇಶದಿಂದ ವಿಶ್ವನಾಥ್‌ಗೆ ಹಿನ್ನಡೆಯಾಗಿದೆ, ನಾವೆಲ್ಲರೂ ಅವರ ಬೆನ್ನಿಗೆ ನಿಂತಿದ್ದೇವೆ - ಭೈರತಿ

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಎಚ್‌ ವಿಶ್ವನಾಥ್ ಅವರಿಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ ಎಂದು ಸಚಿವ ಭೈರತಿ ಬಸವರಾಜ್‌ ರಾಯಚೂರಿನಲ್ಲಿ ಅಭಿಪ್ರಾಯಪಟ್ಟಿದ್ದಾರೆ.

Vijaya Karnataka 13 Jan 2021, 4:32 pm
ರಾಯಚೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲರಿಗೂ ನ್ಯಾಯವನ್ನು ನೀಡಿದ್ದಾರೆ. ನ್ಯಾಯಾಲಯದ ಆದೇಶ ಹಿನ್ನೆಲೆಯಲ್ಲಿ, ಎಚ್ ವಿಶ್ವನಾಥ್ ಅವರಿಗೆ ಸ್ವಲ್ಪ ಹಿನ್ನಡೆಯಾಗಿದೆ. ನಾವು ಎಲ್ಲ ಸಚಿವರೂ ವಿಶ್ವನಾಥ್ ಬೆನ್ನಿಗೆ ನಿಂತಿದ್ದೇವೆ ಎಂದು ಸಚಿವ ಭೈರತಿ ಬಸವರಾಜ್‌ ಹೇಳಿದರು.
Vijaya Karnataka Web BYRATI BASAVARAJ
ಬೈರತಿ ಬಸವರಾಜ್‌, ಸಚಿವ (ಸಂಗ್ರಹ ಚಿತ್ರ)


ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ತಿಂಥಿಣಿಯಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರು ವಿಶ್ವನಾಥ್ ಅವರಿಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ ಎಂದು ತಿಳಿಸಿದರು.

ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿಗಾಗಿ ಕುರುಬರು ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಕುರುಬರಿಗೆ ಎಸ್‌ಟಿ ಮೀಸಲಾತಿ ನೀಡಲು ಸರಕಾರದ ಮೇಲೆ ಒತ್ತಡ ಹಾಕುತ್ತೇವೆ. ಸರಕಾರ ಕುರುಬ ಸಮುದಾಯದ ಬೆನ್ನಿಗಿದೆ ಎಂದು ಅವರು ಹೇಳಿದರು.

ಬಿಎಸ್‌ವೈಗೆ ಬ್ಯ್ಲಾಕ್‌ ಮೇಲ್‌ ಮಾಡಿದ್ರಾ ಸಿಪಿವೈ, ನಾಲಗೆ ಮೇಲೆ ನಿಲ್ಲದ ಯಡಿಯೂರಪ್ಪ: ಕುಟುಕಿದ ಹಳ್ಳಿ ಹಕ್ಕಿ

“ಸಮುದಾಯವನ್ನು ಒಡೆಯುತ್ತಿದ್ದಾರೆ ಎನ್ನುವ ಸಿದ್ದರಾಮಯ್ಯನವರ ಹೇಳಿಕೆ ನಿರಾಧಾರ. ಸರಕಾರಕ್ಕೆ ಎಲ್ಲ ಸಮುದಾಯಗಳು ಒಂದೇ. ಯಾವುದೇ ಜಾತಿಯನ್ನು ಕಡೆಗಣಿಸಿಲ್ಲ,” ಎಂದರು.

ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲು ನೀಡುವ ಸಂಬಂಧ, ಸಮುದಾಯದ ಯುವಕರು ಪ್ರತಿಭಟನೆ ಮಾಡುತ್ತಿದ್ದಾರೆ. ಇದು ಸರಕಾರದ ವಿರುದ್ಧದ ಪ್ರತಿಭಟನೆ ಅಲ್ಲ; ತಮ್ಮ ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದು ಎಸ್‌ಟಿ ಮೀಸಲಾತಿ ನೀಡುವ ಭರವಸೆ ಇದೆ ಎಂದು ಭೈರತಿ ಬಸವರಾಜ್‌ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ