ಆ್ಯಪ್ನಗರ

ಬಸ್‌ ಸೌಕರ್ಯಕ್ಕೆ ಆಗ್ರಹಿಸಿ ಡಿಪೋಗೆ ಮುತ್ತಿಗೆ

ಸಮರ್ಪಕ ಬಸ್‌ ಸೌಕರ್ಯ ಒದಗಿಸುವಂತೆ ಆಗ್ರಹಿಸಿ, ಆನಾಹೊಸೂರು ಹಾಗೂ ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು, ಇಲ್ಲಿನ ಸಾರಿಗೆ ಘಟಕಕ್ಕೆ ಬುಧವಾರ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

Vijaya Karnataka 27 Sep 2018, 5:00 am
ಲಿಂಗಸುಗೂರು : ಸಮರ್ಪಕ ಬಸ್‌ ಸೌಕರ್ಯ ಒದಗಿಸುವಂತೆ ಆಗ್ರಹಿಸಿ, ಆನಾಹೊಸೂರು ಹಾಗೂ ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು, ಇಲ್ಲಿನ ಸಾರಿಗೆ ಘಟಕಕ್ಕೆ ಬುಧವಾರ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
Vijaya Karnataka Web RAC-RCH26LNG05


ಅಡವಿಬಾವಿ, ನೀರಲಕೇರಾ, ಆನಾಹೊಸೂರು, ಬೆಂಡೋಣಿ, ಚಿತ್ತಾಪುರ ಮಾರ್ಗದಲ್ಲಿ ಸಮರ್ಪಕ ಬಸ್‌ ಸೌಕರ್ಯವಿಲ್ಲದೇ ಕಳೆದ ಹಲವು ವರ್ಷಗಳಿಂದ ತೀವ್ರ ತೊಂದರೆ ಎದುರಿಸುವಂತಾಗಿದೆ. ಈ ಗ್ರಾಮಗಳಿಂದ ಲಿಂಗಸುಗೂರು ಪಟ್ಟಣದ ಶಾಲಾ-ಕಾಲೇಜುಗಳಿಗೆ ನಿತ್ಯವೂ ನೂರಾರು ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ. ಆದರೆ, ಈ ಮಾರ್ಗದಲ್ಲಿ ಒಂದೇ ಬಸ್‌ ಸಂಚರಿಸುವುದರಿಂದ ಬಹುತೇಕ ವಿದ್ಯಾರ್ಥಿಗಳು, ಸಾರಿಗೆ ಬಸ್‌ ಪ್ರಯಾಣದಿಂದ ವಂಚಿತರಾಗಿದ್ದಾರೆ. ಬಸ್‌ ಪಾಸ್‌ ಇದ್ದೂ ಖಾಸಗಿ ವಾಹನಗಳ ಮೂಲಕ ಲಿಂಗಸುಗೂರು ತಲುಪಬೇಕಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.

ಸಮಸ್ಯೆ ಬಗೆಹರಿಸುವಂತೆ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಗಿದೆ. ಇತ್ತೀಚೆಗಷ್ಟೇ ಆನಾಹೊಸೂರು ಗ್ರಾಮದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಲಾಗಿತ್ತು. ಆದರೆ, ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಿಲ್ಲ. ಸಮಸ್ಯೆ ಪರಿಹರಿಸುವವರೆಗೆ ಘಟಕ ಬಿಟ್ಟು ಹೋಗುವುದಿಲ್ಲ ಎಂದು ಪಟ್ಟುಹಿಡಿದರು. ನಂತರ ಘಟಕ ವ್ಯವಸ್ಥಾಪಕರು ಭರವಸೆ ನೀಡಿದ್ದರಿಂದ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ