ಆ್ಯಪ್ನಗರ

'ಮಾನವೀಯ ನೆಲೆಗಟ್ಟಿನಲ್ಲಿಸಮಾಜ ಕಟ್ಟಿ'

ಧರ್ಮದ, ಜಾತಿ, ಭಾಷೆ, ಪ್ರಾಂತ್ಯದ ಹೆಸರಿನಲ್ಲಿಕಲಹಗಳು ನಡೆಯುತ್ತಿವೆ, ಇದನ್ನೆಲ್ಲಾಮೀರಿ ಮಾನವೀಯ ಮೌಲ್ಯಗಳ ನೆಲೆಗಟ್ಟಿನಲ್ಲಿನಾವೆಲ್ಲರೂ ನಡೆದರೆ ಉತ್ತಮ ಸಮಾಜ ಕಟ್ಟಲು ಸಾಧ್ಯ ಎಂದು ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯರು ಹೇಳಿದರು.

Vijaya Karnataka 1 Feb 2020, 5:00 am
ಲಿಂಗಸುಗೂರು ; ಧರ್ಮದ, ಜಾತಿ, ಭಾಷೆ, ಪ್ರಾಂತ್ಯದ ಹೆಸರಿನಲ್ಲಿಕಲಹಗಳು ನಡೆಯುತ್ತಿವೆ, ಇದನ್ನೆಲ್ಲಾಮೀರಿ ಮಾನವೀಯ ಮೌಲ್ಯಗಳ ನೆಲೆಗಟ್ಟಿನಲ್ಲಿನಾವೆಲ್ಲರೂ ನಡೆದರೆ ಉತ್ತಮ ಸಮಾಜ ಕಟ್ಟಲು ಸಾಧ್ಯ ಎಂದು ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯರು ಹೇಳಿದರು.
Vijaya Karnataka Web social structure in humanitarian territory
'ಮಾನವೀಯ ನೆಲೆಗಟ್ಟಿನಲ್ಲಿಸಮಾಜ ಕಟ್ಟಿ'


ತಾಲೂಕಿನ ಯರಡೋಣಾ ಗ್ರಾಮದ ಸಿದ್ಧರಾಮೇಶ್ವರ ಗುರುಮಠದಲ್ಲಿಶುಕ್ರವಾರ ನೂತನ ದೇವಾಲಯ ಲೋಕಾರ್ಪಣೆ ಅಂಗವಾಗಿ ನಡೆದ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಅಧ್ಯಾತ್ಮ ಎಂಬುದು ಒಂದು ಧರ್ಮ, ಒಂದು ಜಾತಿಗೆ ಸೀಮಿತವಲ್ಲ. ಪ್ರತಿಯೊಬ್ಬರ ಸಮಾಜದಲ್ಲಿಜೀವನ ಸುಖಮಯದಿಂದ ಸಾಗಲು ಹಾಗೂ ಉಜ್ವಲವಾಗಿ ಬೆಳೆಗಲು ಅಧ್ಯಾತ್ಮ ಜೀವನಕ್ಕೆ ಅಗತ್ಯವಾಗಿದೆ. ದೇವಾಲಯಗಳ ಗೋಪುರಗಳಿಗೆ ಹೆಲಿಕ್ಯಾಪ್ಟರ್‌ನಿಂದ ಪುಷ್ಟ ವೃಷ್ಟಿ ಮಾಡಿದ್ದು ಈ ಭಾಗದಲ್ಲಿಮೊದಲಾಗಿದೆ ಎಂದರು.

ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಈ ಭಾಗ ಮತ್ತುಷ್ಟು ಅಭಿವೃದ್ಧಿಯಾಗಬೇಕಿದೆ. 150ಎ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿದೆ ಅದರ ಅಭಿವೃದ್ಧಿ ಶೀಘ್ರವೇ ನಡೆಯುವ ವಿಶ್ವಾಸ ಇದೆ. ಅದೇ ಹೈದರಾಬಾದ್‌

ಗಣಜಿ ರಸ್ತೆಯನ್ನು ಮೇಲ್ದರ್ಜೆಗೇರಿಸುವ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಶ್ರೀಮಠದ ಮುರುNೕಂದ್ರ ಶಿವಯೋಗಿಗಳು, ಅಮರೇಶ್ವರದ ಗಜದಂಡ ಶಿವಾಚಾರ್ಯರು, ಮಸ್ಕಿ ವರರುದ್ರಮುನಿ ಶಿವಾಚಾರ್ಯರು, ನವಲಕಲ್ಲಸೋಮನಾಥ ಶಿವಾಚಾರ್ಯರು, ತುರ್ವಿಹಾಳದ ಅಮರಗುಂಡ ಶಿವಾಚಾರ್ಯರು, ಶಾಸಕರಾದ ಡಿ.ಎಸ್‌.ಹೂಲಗೇರಿ, ಅಮರೇಗೌಡ ಬಯ್ಯಾಪುರ, ದೊಡ್ಡನಗೌಡ ಲೆಕ್ಕಿಹಾಳ, ವೆಂಕಟರಾವ್‌ ನಾಡಗೌಡ, ಮಾಜಿ ಶಾಸಕ ಮಾನಪ್ಪ ವಜ್ಜಲ್‌, ಮುಖಂಡ ಅಮರಗುಂಡಪ್ಪ ಮೇಟಿ, ಶ್ರೀರಾಮಸೇನಾ ಅಧ್ಯಕ್ಷ ರಮಾಕಾಂತದಾದಾ, ಅಮರಯ್ಯಸ್ವಾಮಿ ಜಾಲಿಬೆಂಚಿ, ಡಾ.ಗಂಗಾಧರಯ್ಯ ಶಾಸ್ತ್ರಿ ಹಾಗೂ ಇನ್ನಿತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ