ಗಂಗಾಧರ ಬಂಡಿಹಾಳ, ಕೊಪ್ಪಳ
ಮೂಲ ಇಲಾಖೆ ತೊರೆದು ಅನ್ಯ ಇಲಾಖೆಗಳಿಗೆ ವಲಸೆ ಹೋಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು ಮಾತೃ ಇಲಾಖೆಯಲ್ಲೇ ಕರ್ತವ್ಯ ನಿರ್ವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಮೊದಲ ಬಾರಿ ಖಡಕ್ ಸಂದೇಶ ರವಾನಿಸಿದೆ.
ಕಳೆದ ನಾಲ್ಕೈದು ವರ್ಷಗಳ ಹಿಂದೆ ಸಮಾಜ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಗೆ ವಲಸೆಹೋಗಿದ್ದ 18 ಕೆಎಎಸ್ ಅಧಿಕಾರಿಗಳಿಗೆ ಈ ಆದೇಶ ಅನ್ವಯಿಸಲಿದೆ. ಈ ಹಿಂದೆ ರಾಜ್ಯಾದ್ಯಂತ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿಯೇ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳು ಕಾರ್ಯನಿರ್ವಹಿಸುತ್ತಿದ್ದವು. ಆದರೆ, ಆಯಾ ಸಮುದಾಯದ ಜನಸಂಖ್ಯೆ ಹಾಗೂ ಸರಕಾರಿ ಯೋಜನೆಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಕೆಲವು ವರ್ಷಗಳ ಹಿಂದೆಯಷ್ಟೇ ಈ ಇಲಾಖೆಗಳು ಬೇರ್ಪಟ್ಟಿವೆ.
ಉಭಯ ಇಲಾಖೆಗಳಲ್ಲಿರುವ ಬಹುತೇಕ ಅಧಿಕಾರಿಗಳು ನೇಮಕಾತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ್ದರೂ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದರು. ರಾಜ್ಯದ ನಾನಾ ಜಿಲ್ಲೆಗಳಲ್ಲಿ 18 ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿರುವ ಸಮಾಜ ಕಲ್ಯಾಣ ಇಲಾಖೆ, ಮಾತೃ ಇಲಾಖೆಯ ಕರ್ತವ್ಯಕ್ಕೆ ಹಾಜರಾಗುವಂತೆ ಈ ಎಲ್ಲ ಅಧಿಕಾರಿಗಳಿಗೆ ಸೂಚಿಸಿದೆ.
ಉಭಯ ಇಲಾಖೆಗಳಿಗೆ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಸೇವೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಾತೃ ಇಲಾಖೆಗೆ ಹಿಂಪಡೆಯಲಾಗಿದೆ ಎಂದು ಜುಲೈ 11 ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
ಈ ಅಧಿಕಾರಿಗಳು: ಕಲಬುರಗಿಯ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಮುನಾವರ್ದೌಲ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ವಿ.ವಿ.ವೆಂಕಟರಮಣರೆಡ್ಡಿ (ಹಾಸನ), ಶಿವಾನಂದ ಕುಂಬಾರ್ (ಬಾಗಲಕೋಟ), ಕೆ.ನಾಗರಾಜ (ಹಾವೇರಿ), ಪ್ರಶಾಂತ ವರಗಪ್ಪನಗರ್ (ರಾಯಚೂರು), ಎನ್.ಆರ್.ಪುರುಷೋತ್ತಮ್ ( ಧಾರವಾಡ), ಮಹೇಶ್ (ಚಿತ್ರದುರ್ಗ), ಬಿ.ರಂಗೇಗೌಡ (ತುಮಕೂರು), ಎಚ್.ವಿ.ಮಂಜುನಾಥ (ಶಿವಮೊಗ್ಗ), ಎಂ.ವಿ.ಶಿವಕುಮಾರ (ರಾಮನಗರ), ರಾಮನಗೌಡ ಕನ್ನೊಳ್ಳಿ (ಬೆಳಗಾವಿ), ಜಗದೀಶ್ ಗಂಗಣ್ಣವರ್ (ಚಿಕ್ಕಬಳ್ಳಾಪುರ), ಚಿದಾನಂದಪ್ಪ (ಕೊಪ್ಪಳ), ಕೆ.ಶ್ರೀನಿವಾಸ (ಚಾಮರಾಜನಗರ), ಎಸ್.ಎಚ್.ಲಕ್ಷ್ಮೇಗೌಡ (ದಕ್ಷಿಣ ಕನ್ನಡ), ವಿಜಯಲಕ್ಷ್ಮಿ (ಬೀದರ್), ಬಿ.ಕಲ್ಲೇಶ (ಗದಗ) ಹಾಗೂ ಎಸ್.ಆರ್.ರಂಗಪ್ಪ (ದಾವಣಗೆರೆ). ಈ ಅಧಿಕಾರಿಗಳು ತಕ್ಷಣವೇ ಕರ್ತವ್ಯದಿಂದ ಬಿಡುಗಡೆಗೊಂಡು ಮುಂದಿನ ಸ್ಥಳ ನಿಯುಕ್ತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಅಪರ ಕಾರ್ಯದರ್ಶಿ ಬಳಿ ಕರ್ತವ್ಯಕ್ಕೆ ಹಾಜರಾಗುವಂತೆ ಜಂಟಿ ಕಾರ್ಯದರ್ಶಿ ಗೋಪಾಲ್ ಅವರು, ಜುಲೈ 11 ರಂದು ಸೂಚಿಸಿದ್ದಾರೆ.
ಇಲಾಖಾವಾರು ಸಚಿವರು: ಸಮಾಜ ಕಲ್ಯಾಣ ಇಲಾಖೆಯಿಂದ ಬೇರೆ ಇಲಾಖೆಗಳಿಗೆ ಈ ಅಧಿಕಾರಿಗಳು 4-5 ವರ್ಷಗಳ ಹಿಂದೆ ನಿಯೋಜನೆಗೊಂಡಿದ್ದಾರೆ. ಆದರೆ, ಮಾತೃ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆ ಕಂಡುಬಂದಿದೆ. ಅಷ್ಟೇ ಅಲ್ಲದೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರಿದ್ದಾರೆ. ಕಳೆದ ಸರಕಾರದ ಅವಧಿಯಲ್ಲಿ ಒಬ್ಬರೇ ಸಚಿವರು ಉಭಯ ಇಲಾಖೆಗಳನ್ನು ನಿರ್ವಹಿಸುತ್ತಿದ್ದ ಹಿನ್ನೆಲೆಯಲ್ಲಿ ಅಧೀನ ಇಲಾಖೆಗಳಲ್ಲಿ ಕೆಲ ಅಧಿಕಾರಿಗಳು ನಿಯೋಜನೆ ಮೇರೆಗೆ ತೆರಳಿದ್ದರು. ಸದ್ಯ ಇಲಾಖೆಗಳಿಗೆ ಪ್ರತ್ಯೇಕ ಸಚಿವರಿರುವ ಜತೆಗೆ ಮೂಲ ಇಲಾಖೆಗಳಲ್ಲಿ ಕೆಎಎಸ್ ಅಧಿಕಾರಿಗಳ ಕೊರತೆ ಇರುವುದರಿಂದ ಬೇರೆ ಇಲಾಖೆಗಳಿಗೆ ತೆರಳಿದ್ದ ಅಧಿಕಾರಿಗಳನ್ನು ಮೂಲ ಇಲಾಖೆಗಳಿಗೆ ಕರೆಯಿಸಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಮೂಲ ಇಲಾಖೆ ತೊರೆದು ಅನ್ಯ ಇಲಾಖೆಗಳಿಗೆ ವಲಸೆ ಹೋಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು ಮಾತೃ ಇಲಾಖೆಯಲ್ಲೇ ಕರ್ತವ್ಯ ನಿರ್ವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಮೊದಲ ಬಾರಿ ಖಡಕ್ ಸಂದೇಶ ರವಾನಿಸಿದೆ.
ಕಳೆದ ನಾಲ್ಕೈದು ವರ್ಷಗಳ ಹಿಂದೆ ಸಮಾಜ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಗೆ ವಲಸೆಹೋಗಿದ್ದ 18 ಕೆಎಎಸ್ ಅಧಿಕಾರಿಗಳಿಗೆ ಈ ಆದೇಶ ಅನ್ವಯಿಸಲಿದೆ. ಈ ಹಿಂದೆ ರಾಜ್ಯಾದ್ಯಂತ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿಯೇ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳು ಕಾರ್ಯನಿರ್ವಹಿಸುತ್ತಿದ್ದವು. ಆದರೆ, ಆಯಾ ಸಮುದಾಯದ ಜನಸಂಖ್ಯೆ ಹಾಗೂ ಸರಕಾರಿ ಯೋಜನೆಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಕೆಲವು ವರ್ಷಗಳ ಹಿಂದೆಯಷ್ಟೇ ಈ ಇಲಾಖೆಗಳು ಬೇರ್ಪಟ್ಟಿವೆ.
ಉಭಯ ಇಲಾಖೆಗಳಲ್ಲಿರುವ ಬಹುತೇಕ ಅಧಿಕಾರಿಗಳು ನೇಮಕಾತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ್ದರೂ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದರು. ರಾಜ್ಯದ ನಾನಾ ಜಿಲ್ಲೆಗಳಲ್ಲಿ 18 ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿರುವ ಸಮಾಜ ಕಲ್ಯಾಣ ಇಲಾಖೆ, ಮಾತೃ ಇಲಾಖೆಯ ಕರ್ತವ್ಯಕ್ಕೆ ಹಾಜರಾಗುವಂತೆ ಈ ಎಲ್ಲ ಅಧಿಕಾರಿಗಳಿಗೆ ಸೂಚಿಸಿದೆ.
ಉಭಯ ಇಲಾಖೆಗಳಿಗೆ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಸೇವೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಾತೃ ಇಲಾಖೆಗೆ ಹಿಂಪಡೆಯಲಾಗಿದೆ ಎಂದು ಜುಲೈ 11 ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
ಈ ಅಧಿಕಾರಿಗಳು: ಕಲಬುರಗಿಯ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಮುನಾವರ್ದೌಲ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ವಿ.ವಿ.ವೆಂಕಟರಮಣರೆಡ್ಡಿ (ಹಾಸನ), ಶಿವಾನಂದ ಕುಂಬಾರ್ (ಬಾಗಲಕೋಟ), ಕೆ.ನಾಗರಾಜ (ಹಾವೇರಿ), ಪ್ರಶಾಂತ ವರಗಪ್ಪನಗರ್ (ರಾಯಚೂರು), ಎನ್.ಆರ್.ಪುರುಷೋತ್ತಮ್ ( ಧಾರವಾಡ), ಮಹೇಶ್ (ಚಿತ್ರದುರ್ಗ), ಬಿ.ರಂಗೇಗೌಡ (ತುಮಕೂರು), ಎಚ್.ವಿ.ಮಂಜುನಾಥ (ಶಿವಮೊಗ್ಗ), ಎಂ.ವಿ.ಶಿವಕುಮಾರ (ರಾಮನಗರ), ರಾಮನಗೌಡ ಕನ್ನೊಳ್ಳಿ (ಬೆಳಗಾವಿ), ಜಗದೀಶ್ ಗಂಗಣ್ಣವರ್ (ಚಿಕ್ಕಬಳ್ಳಾಪುರ), ಚಿದಾನಂದಪ್ಪ (ಕೊಪ್ಪಳ), ಕೆ.ಶ್ರೀನಿವಾಸ (ಚಾಮರಾಜನಗರ), ಎಸ್.ಎಚ್.ಲಕ್ಷ್ಮೇಗೌಡ (ದಕ್ಷಿಣ ಕನ್ನಡ), ವಿಜಯಲಕ್ಷ್ಮಿ (ಬೀದರ್), ಬಿ.ಕಲ್ಲೇಶ (ಗದಗ) ಹಾಗೂ ಎಸ್.ಆರ್.ರಂಗಪ್ಪ (ದಾವಣಗೆರೆ). ಈ ಅಧಿಕಾರಿಗಳು ತಕ್ಷಣವೇ ಕರ್ತವ್ಯದಿಂದ ಬಿಡುಗಡೆಗೊಂಡು ಮುಂದಿನ ಸ್ಥಳ ನಿಯುಕ್ತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಅಪರ ಕಾರ್ಯದರ್ಶಿ ಬಳಿ ಕರ್ತವ್ಯಕ್ಕೆ ಹಾಜರಾಗುವಂತೆ ಜಂಟಿ ಕಾರ್ಯದರ್ಶಿ ಗೋಪಾಲ್ ಅವರು, ಜುಲೈ 11 ರಂದು ಸೂಚಿಸಿದ್ದಾರೆ.
ಇಲಾಖಾವಾರು ಸಚಿವರು: ಸಮಾಜ ಕಲ್ಯಾಣ ಇಲಾಖೆಯಿಂದ ಬೇರೆ ಇಲಾಖೆಗಳಿಗೆ ಈ ಅಧಿಕಾರಿಗಳು 4-5 ವರ್ಷಗಳ ಹಿಂದೆ ನಿಯೋಜನೆಗೊಂಡಿದ್ದಾರೆ. ಆದರೆ, ಮಾತೃ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆ ಕಂಡುಬಂದಿದೆ. ಅಷ್ಟೇ ಅಲ್ಲದೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವರಿದ್ದಾರೆ. ಕಳೆದ ಸರಕಾರದ ಅವಧಿಯಲ್ಲಿ ಒಬ್ಬರೇ ಸಚಿವರು ಉಭಯ ಇಲಾಖೆಗಳನ್ನು ನಿರ್ವಹಿಸುತ್ತಿದ್ದ ಹಿನ್ನೆಲೆಯಲ್ಲಿ ಅಧೀನ ಇಲಾಖೆಗಳಲ್ಲಿ ಕೆಲ ಅಧಿಕಾರಿಗಳು ನಿಯೋಜನೆ ಮೇರೆಗೆ ತೆರಳಿದ್ದರು. ಸದ್ಯ ಇಲಾಖೆಗಳಿಗೆ ಪ್ರತ್ಯೇಕ ಸಚಿವರಿರುವ ಜತೆಗೆ ಮೂಲ ಇಲಾಖೆಗಳಲ್ಲಿ ಕೆಎಎಸ್ ಅಧಿಕಾರಿಗಳ ಕೊರತೆ ಇರುವುದರಿಂದ ಬೇರೆ ಇಲಾಖೆಗಳಿಗೆ ತೆರಳಿದ್ದ ಅಧಿಕಾರಿಗಳನ್ನು ಮೂಲ ಇಲಾಖೆಗಳಿಗೆ ಕರೆಯಿಸಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.