ಆ್ಯಪ್ನಗರ

ಸರಕಾರಿ ವೈದ್ಯರು ಖಾಸಗಿ ಕ್ಲಿನಿಕ್‌ನಲ್ಲಿ ನಿರ್ವಹಿಸಿದರೆ ಅಮಾನತು: ಶ್ರೀರಾಮುಲು ಎಚ್ಚರಿಕೆ

ಬಿಜೆಪಿ ಶಾಸಕರನ್ನು ಸೆಳೆಯಲು ಕಾಂಗ್ರೆಸ್‌ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಊಹಪೋಹಗಳ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಯಾರೂ ಕೂಡ ಪಕ್ಷ ಬಿಡಲ್ಲ ಎಂದಿದ್ದಾರೆ.

Vijaya Karnataka Web 14 Oct 2019, 9:26 pm
ರಾಯಚೂರು: ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆಂಬ ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆಗೆ ಆರೋಗ್ಯ ಸಚಿವ ಶ್ರೀರಾಮುಲು ಟಾಂಗ್‌ ನೀಡಿದ್ದಾರೆ.
Vijaya Karnataka Web ಶ್ರೀರಾಮುಲು
ಶ್ರೀರಾಮುಲು


ರಾಯಚೂರಿನ ರಿಮ್ಸ್‌ ಕಾಲೇಜಿಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಶ್ರೀರಾಮುಲು ಮಾತನಾಡಿದರು.

ಕಾಂಗ್ರೆಸ್ ನಾಯಕರು ನಿರುದ್ಯೋಗಿಗಳಾಗಿದ್ದಾರೆ. ಹಾಗಾಗಿ ಅವರು ಮನಬಂದಂತೆ ಮಾತನಾಡುತ್ತಿದ್ದಾರೆ. ಬಿಜೆಪಿಯ ಯಾವ ಶಾಸಕರೂ ಸಂಪರ್ಕದಲ್ಲಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಧಿಕಾರಕ್ಕಾಗಿ ಒಂದಾಗಿದ್ದರಿಂದಲೇ ಮೈತ್ರಿ ಸರಕಾರ ಪತನವಾಯ್ತು ಎಂದರು.

ಬಿಜೆಪಿಗೆ ಸಿಕ್ಕಿದ್ದ ಜನಾದೇಶ ಮೀರಿ ಮೈತ್ರಿ ಮಾಡಿಕೊಂಡಿದ್ದರಿಂದ ಎರಡೂ ಪಕ್ಷಗಳಿಗೆ ದುರ್ಗತಿ ಒದಗಿತು ಎಂದು ತಿಳಿಸಿದರು.

ರಾಜ್ಯದಲ್ಲಿ ವೈದ್ಯರು ಸರಕಾರಿ ಆಸ್ಪತ್ರೆ ಹಾಗೂ ಖಾಸಗಿ ಕ್ಲಿನಿಕ್ ಗಳಲ್ಲಿಯೂ ಕಾರ್ಯನಿರ್ವ ಹಿಸುವಂತಿಲ್ಲ. ಅಂಥ ವೈದ್ಯರ ಮಾಹಿತಿ ನೀಡಿದರೆ ಅಮಾನತುಗೊಳಿಸಲಾಗುವುದು ಎಂದು ಸಚಿವರು ಎಚ್ಚರಿಸಿದರು.

ಅಮಾನತು ಶಿಕ್ಷೆಯಲ್ಲದೇ ಹೆಚ್ಚಿನ ಕ್ರಮಕ್ಕೂ ನಿರ್ಧಾರ. ಖಾಸಗಿ ಆಸ್ಪತ್ರೆಗಳಿಗೆ ಅನಗತ್ಯವಾಗಿ ರೋಗಿಗಳನ್ನು ತೆರಳುವಂತೆ ಶಿಫಾರಸು ಮಾಡುವುದು, ಔಷಧಕ್ಕೆ ಚೀಟಿ ಬರೆದು ಹೊರಗಿನಿಂದ ತರುವಂತೆ ಸೂಚಿಸುವುದನ್ನು ಸಹಿಸಲಾಗದು ಎಂದರು.

ರಾಜ್ಯದ ಸರಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಸಂಸ್ಥೆಗಳ ಏಕಸ್ವಾಮ್ಯತೆ ಹೆಚ್ಚಿರುವುದು ಗಮನದಲ್ಲಿದ್ದು, ಶೀಘ್ರ ಅದಕ್ಕೆ ಕಡಿವಾಣ ಹಾಕಲಾಗುತ್ತದೆ ಎಂದು ಶ್ರೀರಾಮುಲು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ