ಆ್ಯಪ್ನಗರ

ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದನ್ನು ಪಕ್ಷದ ಅಧ್ಯಕ್ಷರು ತೀರ್ಮಾನಿಸಲಿದ್ದಾರೆ: ಸಿಎಂ

ಸಚಿವ ಸ್ಥಾನದ ವಿಚಾರವಾಗಿ ದೆಹಲಿಗೆ ತೆರಳುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಅಲ್ಲದೆ, ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದೂ ಸಹ ರಾಯಚೂರಿನಲ್ಲಿ ಸಿಎಂ ತಿಳಿಸಿದ್ದಾರೆ.

Vijaya Karnataka Web 13 Jan 2020, 2:33 pm
ರಾಯಚೂರು: ಸಚಿವ ಸಂಪುಟ ವಿಸ್ತರಣೆ ವಿಚಾರ ಇಂದು ರಾತ್ರಿ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಭೇಟಿಯಾಗುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಿಣಿಯಲ್ಲಿ ಸಿಎಂ ಹೀಗೆ ಹೇಳಿದ್ದಾರೆ.
Vijaya Karnataka Web yediyurappa toi


ಬಿಜೆಪಿ ವರಿಷ್ಠರ ನಿರ್ಧಾರದಂತೆ ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಬಗ್ಗೆ ಅಂತಿಮ ನಿರ್ಧಾರವಾಗಲಿದೆ. ಪಕ್ಷದ ವರಿಷ್ಠರು ಒಪ್ಪಿದಲ್ಲಿ 2 - 3 ದಿನದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ರಾಯಚೂರು ಜಿಲ್ಲೆಯಲ್ಲಿ ಸಿಎಂ ಯಡಿಯೂರಪ್ಪ ತಿಳಿಸಿದರು.

ಇನ್ನು, ಮಾಜಿ ಸಚಿವ ಎಚ್.ವಿಶ್ವನಾಥ್ 17 ಜನರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಯಡಿಯೂರಪ್ಪ, ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದನ್ನು ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನಿಸಲಿದ್ದಾರೆ ಎಂದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಿಣಿಯಲ್ಲಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿ: ಬಿಎಸ್‌ವೈ ಮಾತು vs ನಿಷ್ಠರ ಪಟ್ಟು: ಗೆದ್ದೋರಿಗೆಲ್ಲ ಸಿಗಲ್ಲ ಮಂತ್ರಿ ಪಟ್ಟ!

ಕಾಂಗ್ರೆಸ್‌, ಜೆಡಿಎಸ್‌ನಿಂದ ಬಂದ 17 ನಾಯಕರಿಗೂ ಸಚಿವ ಸ್ಥಾನ ನೀಡಬೇಕು ಎಂದು ಎಚ್‌. ವಿಶ್ವನಾಥ್‌ ಹೇಳಿದ್ದರು. ಆದರೆ, ಉಪಚುನಾವಣೆಯಲ್ಲಿ ಗೆದ್ದ ಎಲ್ಲ ಶಾಸಕರಿಗೂ ಮಂತ್ರಿ ಸ್ಥಾನ ಸಿಗೋದು ಅನುಮಾನವಾಗಿದೆ. ಗೆದ್ದವರ ಪೈಕಿ ಕೇವಲ 8 ಶಾಸಕರು ಮಾತ್ರ ಮಂತ್ರಿಯಾಗಲಿದ್ದಾರೆ ಎನ್ನಲಾಗಿದೆ. ಸಿಎಂ ಯಡಿಯೂರಪ್ಪ ಸಹ ಈ ಬಗ್ಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿ ನಂತರ ಸಿಹಿ ಸುದ್ದಿ, ಸಚಿವ ಸಂಪುಟ ವಿಸ್ತರಣೆ ಆಗುವ ವಿಶ್ವಾಸ: ಬಿಸಿ ಪಾಟೀಲ್‌

ಜನವರಿ 17 ಅಥವಾ 18ಕ್ಕೆ ಸಂಪುಟ ವಿಸ್ತರಣೆ..? ಸಂಕ್ರಾಂತಿ ಬಳಿಕ 'ಅರ್ಹ'ರಿಗೆ ಬೆಲ್ಲ..?

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ