ಆ್ಯಪ್ನಗರ

ವಿದ್ಯಾರ್ಥಿನಿ ಸಾವಿನ ಪ್ರಕರಣ ತನಿಖೆಗೆ ಆಗ್ರಹ

ರಾಯಚೂರಿನ ನವೋದಯ ಕಾಲೇಜಿನ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಮಧು ಪತ್ತಾರ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ತಹಸೀಲ್ದಾರ್‌ ಬಿ.ಎಸ್‌.ಖಡಕ್‌ಬಾವಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 20 Apr 2019, 5:00 am
ಸಿಂಧನೂರು ; ರಾಯಚೂರಿನ ನವೋದಯ ಕಾಲೇಜಿನ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಮಧು ಪತ್ತಾರ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ತಹಸೀಲ್ದಾರ್‌ ಬಿ.ಎಸ್‌.ಖಡಕ್‌ಬಾವಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web RAC-RCH19SND3


ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಮಧು ಪತ್ತಾರ ಸಾವಿನ ಪ್ರಕರಣವನ್ನು ಪಾರದರ್ಶಕ ತನಿಖೆ ನಡೆಸಲು ಮುಂದಾಗಬೇಕಾದ ಪೊಲೀಸ್‌ ಇಲಾಖೆಯ ಅಧಿಕಾರಿಗಳು ನಾನಾ ಸಬೂಬು ಹೇಳುತ್ತಿರುವುದು ಸರಿಯಲ್ಲ. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಶೀಘ್ರ ತನಿಖೆ ನಡೆಸಿ ಅವರನ್ನು ಪತ್ತೆ ಹಚ್ಚುವ ಮೂಲಕ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಜಿಲ್ಲೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ ಘಟನೆಗಳು ಮರುಕಳಿಸದಂತೆ ಕಾನೂನು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ನಿರ್ಲಕ್ಷ ್ಯ ಭಾವನೆ ತಾಳಿದ್ದೇ ಆದರೆ ಜಿಲ್ಲಾದ್ಯಂತ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು.

ಕರ್ನಾಟಕ ವೇದಿಕೆ ಸಂಚಾಲಕ ಸಮ್ಮದ್‌ ಚೌದ್ರಿ, ಸಿಐಟಿಯು ಜಿಲ್ಲಾ ಘಟಕದ ಕಾರ್ಯದರ್ಶಿ ಶೇಕ್ಷಾಖಾದ್ರಿ ಎಸ್‌ಐಒ ತಾಲೂಕು ಘಟಕದ ಅಧ್ಯಕ್ಷ ಇಮ್ತಿಯಾಜ್‌, ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರಾದ ಬಸವರಾಜ ಹಸಮಕಲ್‌, ಶಂಕರ ಗುರಿಕಾರ, ದುರುಗೇಶ, ಯಾಖೂಕ್‌ಅಲಿ, ರಶೀದ್‌, ಎಂ.ಗಂಗಾಧರ್‌, ಎಂ.ಎಸ್‌.ರಾಜಶೇಖರ, ಮಲ್ಲಿಕಾರ್ಜುನ, ಮಹಾದೇವ, ಹುಲ್ಲೇಶ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ